ಕಾರ್ತಿ ಚಿದಂಬರಂ 
ದೇಶ

ಕಾರ್ತಿ ಚಿದಂಬರಂಗೆ ಸದ್ಯಕ್ಕೆ ಇಡಿ ಬಂಧನದಿಂದ ರಿಲೀಫ್: ದೆಹಲಿ ಹೈಕೋರ್ಟ್ ನಿಂದ ಮಧ್ಯಂತರ ಪರಿಹಾರ

ಐಎನ್ ಎಕ್ಸ್ ಮೀಡಿಯಾ ಹಗರಣ ಸಂಬಂಧ ಕಾರ್ತಿ ಚಿದಂಬರಂ ಅವರಿಗೆ ದೆಹಲಿ ಹೈಕೋರ್ಟ್ ಮಧ್ಯಂತರ ಪರಿಹಾರ ನೀಡಿದೆ. ...

ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಹಗರಣ ಸಂಬಂಧ ಕಾರ್ತಿ ಚಿದಂಬರಂ ಅವರಿಗೆ ದೆಹಲಿ ಹೈಕೋರ್ಟ್ ಮಧ್ಯಂತರ ಪರಿಹಾರ ನೀಡಿದೆ.  
ಮುಂದಿನ ವಿಚಾರಣೆವರೆಗೂ ಕಾರ್ತಿ ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸುವಂತಿಲ್ಲ ಎಂದು ಕೋರ್ಟ್ ನಿರ್ದೇಶನ ನೀಡಿದೆ. ಹಣ ಅಕ್ರಮ ವರ್ಗಾವಣೆ ಸಂಬಂಧ ಕಳೆದ ವಾರ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ಬಂಧಿಸಿತ್ತು, ಮಾರ್ಚ್ 9 ರವರೆಗೂ ಸಿಬಿಐ ಕಸ್ಟಡಿಗೆ ತೆಗೆದುಕೊಂಡಿತ್ತು, ಇಂದು ಕಾರ್ತಿ ಚಿದಂಬರಂ ಸಿಬಿಐ ಕಸ್ಟಡಿ ಅಂತ್ಯಗೊಳ್ಳುವ ಹಿನ್ನೆಲೆಯಲ್ಲಿ ಮಾರ್ಚ್ 20 ರವರೆಗೂ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸುವಂತಿಲ್ಲ ಎಂದು ತಿಳಿಸಿದೆ,
ಇಂದು ದೆಹಲಿ  ಹೈಕೋರ್ಟ್ ಆದೇಶದ ಪ್ರಕಾರ, ಒಂದು ವೇಳೆ ಸಿಬಿಐ ಕೇಸ್ ನಲ್ಲಿ ವಿಚಾರಣಾ ನ್ಯಾಯಾಲಯ ಕಾರ್ತಿ ಚಿದಂಬರಂಗೆ ಜಾಮೀನು ನೀಡಿದರೇ ಅಲ್ಲಿಯವರೆಗೆ, ಜಾರಿ ನಿರ್ದೇಶನಾಲಯ ಕಾರ್ತಿ ಅವರನ್ನು ಬಂಧಿಸಬಾರದೆಂದು ಸೂಚನೆ ನೀಡಿದೆ. ಮಾರ್ಚ್ 9ರ ವರೆಗೂ ಸಿಬಿಐ ಕಸ್ಟಡಿಗೆ ವಹಿಸಲಾಗಿತ್ತು. ಹೀಗಾಗಿ ಮಾರ್ಚ್ 20ರ ವರೆಗೂ ಅಂದರೆ ಮುಂದಿನ ವಿಚಾರಣೆವರೆಗೂ ಬಂಧಿಸುವಂತಿಲ್ಲ ಎಂದು ಹೇಳಿದೆ.
ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರು, ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ವಜಾಗೊಳಿಸಬೇಕೆಂದು ಕಾರ್ತಿ ಚಿದಂಬರಂ ದೆಹಲಿ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

ಗುಜರಾತ್‌ನಲ್ಲಿ ಎಎಪಿ ರೈತರ ರ್ಯಾಲಿಯಲ್ಲಿ ಹಿಂಸಾಚಾರ; ಕಲ್ಲು ತೂರಿದ ರೈತರು, 3 ಪೊಲೀಸರಿಗೆ ಗಾಯ

SCROLL FOR NEXT