ಸಾಂದರ್ಭಿಕ ಚಿತ್ರ 
ದೇಶ

ಚೀನಾ ಗಡಿ ಕಾಯುವ ವೇಳೆ ಹುತಾತ್ಮರಾದರೆ, ಗಾಯಗೊಂಡರೆ ಸಂಪೂರ್ಣ ವೇತನ ಪಿಂಚಣಿ

ಭಾರತ-ಚೀನಾ ಗಡಿಯನ್ನು ಕಾಪಾಡುವ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಸಿಬ್ಬಂದಿ ಹುತಾತ್ಮರಾದರೆ....

ನವದೆಹಲಿ: ಭಾರತ-ಚೀನಾ ಗಡಿಯನ್ನು ಕಾಪಾಡುವ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಸಿಬ್ಬಂದಿ ಹುತಾತ್ಮರಾದರೆ ಅಥವಾ ಗಾಯಗೊಳ್ಳುವ ಯೋಧರನ್ನು ಕೇಂದ್ರ ಸರ್ಕಾರ 'ವಿಶೇಷ' ಪಿಂಚಣಿ ಯೋಜನೆಯ ವ್ಯಾಪ್ತಿಗೆ ಸೇರಿಸಿದೆ.  ಆದರೆ ಇದನ್ನು ಪೂರ್ವಾನ್ವಯವಾಗುವಂತೆ ಜಾರಿಗೊಳಿಸಬೇಕು ಎಂಬ ಸೇನೆಯ ದೀರ್ಘಾವಧಿಯ ಬೇಡಿಕೆಯನ್ನು ತಳ್ಳಿಹಾಕಲಾಗಿದೆ.
ಈ 'ವಿಶೇಷ ಕುಟುಂಬ ಪಿಂಚಣಿ' ಯೋಜನೆ ಪಾಕಿಸ್ತಾನದೊಂದಿಗಿನ ಅಂತರಾಷ್ಟ್ರೀಯ ಗಡಿಯಲ್ಲಿ ಮತ್ತು ಗಡಿ ನಿಯಂತ್ರಣ ರೇಖೆ(ಎಲ್ ಒಸಿ) ಬಳಿ ನಿಯೋಜಿತ ಭದ್ರತಾ ಸಿಬ್ಬಂದಿಗಳಿಗೆ ಅನ್ವಯಿಸುತ್ತದೆ.
ಈ ಹಿಂದೆ ಶೇ.30ರಷ್ಟು ಸಾಮಾನ್ಯ ಕುಟುಂಬ ಪಿಂಚಣಿ ನೀಡಲಾಗುತ್ತಿದ್ದು, ಈಗ ವಿಶೇಷ ಪಿಂಚಣಿ ಯೋಜನೆಯಲ್ಲಿ ಶೇ.100ರಷ್ಟು ಪಿಂಚಣಿ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವಿಶೇಷ ಕುಟುಂಬ ಪಿಂಚಣಿ ಯೋಜನೆ ಮಾರ್ಚ್ 7ರಿಂದ ಜಾರಿಗೆ ಬರಲಿದೆ ಎಂದು ರಕ್ಷಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಮೋದಿಯವರು ಅವಮಾನ ಸಹಿಸುವುದಿಲ್ಲ, ಅವರು ಬುದ್ಧಿವಂತ ನಾಯಕ, ತಲೆಬಾಗಿಕೊಂಡು ಹೋಗುವವರಲ್ಲ': US tariffs ಮಧ್ಯೆ ಪುಟಿನ್ ಪ್ರಶಂಸೆ ಮಾತು!

ರಾಜ್ಯಕ್ಕೆ 3,705 ಕೋಟಿ ರೂ. ತೆರಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ..!

ಪೇಸ್‌ಮೇಕರ್‌ ಅಳವಡಿಕೆ ಯಶಸ್ವಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ಆಸ್ಪತ್ರೆಯಿಂದ ಡಿಸ್‌ಚಾರ್ಜ್

Karur stampede: ನಟ ಮತ್ತು ಟಿವಿಕೆ ಅಧ್ಯಕ್ಷ ವಿಜಯ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

Karnataka Rains- ಬೆಂಗಳೂರು ಸೇರಿ ರಾಜ್ಯಾದ್ಯಂತ ಅ.9ರವರೆಗೆ ಮಳೆ

SCROLL FOR NEXT