ಸಂಗ್ರಹ ಚಿತ್ರ 
ದೇಶ

ಮನೆಯೂ ಇಲ್ಲ, ಸರ್ಕಾರವೂ ಇಲ್ಲ; ಪಕ್ಷದ ಕಚೇರಿಯಲ್ಲೇ ತ್ರಿಪುರಾ ಮಾಜಿ ಸಿಎಂ ಮಾಣಿಕ್ ವಾಸ್ತವ್ಯ

ತ್ರಿಪುರಾದಲ್ಲಿ ಬರೊಬ್ಬರಿ 20 ವರ್ಷಕ್ಕೂ ಅಧಿಕ ಕಾಲ ಆಡಳಿತ ನಡೆಸಿದ್ದ ಮಾಜಿ ಸಿಎಂ ಮಾಣಿಕ್ ಸರ್ಕಾರ ಇನ್ನು ಮುಂದೆ ತಮ್ಮ ಪಕ್ಷದ ಕಚೇರಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಅಗರ್ತಲಾ: ತ್ರಿಪುರಾದಲ್ಲಿ ಬರೊಬ್ಬರಿ 20 ವರ್ಷಕ್ಕೂ ಅಧಿಕ ಕಾಲ ಆಡಳಿತ ನಡೆಸಿದ್ದ ಮಾಜಿ ಸಿಎಂ ಮಾಣಿಕ್ ಸರ್ಕಾರ ಇನ್ನು ಮುಂದೆ ತಮ್ಮ ಪಕ್ಷದ ಕಚೇರಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಹೌದು.. ಬರೋಬ್ಬರಿ 20 ವರ್ಷ ಕಾಲ ತ್ರಿಪುರಾದಲ್ಲಿ ಆಡಳಿತ ನಡೆಸಿದ್ದ ಮಾಣಿಕ್‌ ಸರ್ಕಾರ್‌ ತಮ್ಮದೆಂದು ಹೇಳಿಕೊಳ್ಳಲು ಸ್ವಂತ ಮನೆ ಇಲ್ಲ. ಈ ಹಿಂದೆ ಸಿಎಂ ಆಗಿದ್ದ ಮಾಣಿಕ್ ಸರ್ಕಾರ ಸರ್ಕಾರಿ ಬಂಗಲೆಯಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ ಇದೀಗ ಅವರ ಪಕ್ಷ ಚುನಾವಣೆಯಲ್ಲಿ ಸೋತಿರುವುದರಿಂದ ಅವರು ಅನಿವಾರ್ಯವಾಗಿ ಸರ್ಕಾರಿ ಬಂಗಲೆ ತೆರವು ಮಾಡಿದ್ದು, ಇದೀಗ ತಮ್ಮ ಪಕ್ಷದ ಕಚೇರಿಯನ್ನೇ ಮನೆ ಮಾಡಿಕೊಂಡು ಅಲ್ಲೇ ವಾಸ್ತವ್ಯ ಹೂಡಿದ್ದಾರೆ.
ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಎಂದೇ ಹೆಸರಾಗಿದ್ದ ತ್ರಿಪುರಾದ ಮಾಣಿಕ್‌ ಸರ್ಕಾರ್‌ ಸಿಪಿಐ(ಎಂ) ಕಚೇರಿ ಆವರಣದಲ್ಲಿರುವ ಅತಿಥಿಗೃಹದ ಕೋಣೆಯೊಂದರಲ್ಲಿ ಪತ್ನಿ ಪಾಂಚಾಲಿ ಭಟ್ಟಾಚಾರ್ಯ ಜತೆ ವಾಸಿಸಲಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಬಿಪ್ಲಬ್‌ ದೇಬ್‌ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಗುರುವಾರವೇ ಸರ್ಕಾರ್‌ ಅವರು ವಾಸ್ತವ್ಯ ಬದಲಿಸಿದರು. ಇನ್ನು ಮಾಣಿಕ್ ಸರ್ಕಾರ್ ಅವರು ಸರ್ಕಾರಿ ಬಂಗಲೆ ಖಾಲಿ ಮಾಡುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿರುವ ನಿಯೋಜಿತ ಮುಖ್ಯಮಂತ್ರಿ ಬಿಪ್ಲಬ್‌ ಅವರು, ಸರ್ಕಾರ್‌ ಅವರಿಗೆ ಉತ್ತಮ ವಸತಿಗೃಹ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಪಕ್ಷದ ಕಚೇರಿಯ ಕಿಚನ್‌ನಲ್ಲಿ ತಯಾರಾಗುವ ಅಡುಗೆಯನ್ನೇ ಅವರು ಸೇವಿಸಲಿದ್ದಾರೆ. ಹೊಸ ಸರ್ಕಾರ ವಸತಿಗೃಹ ಮಂಜೂರು ಮಾಡಿದರೆ ಅದರಲ್ಲಿ ವಾಸಿಸುವ ತೀರ್ಮಾನ ಸರ್ಕಾರ್‌ ಅವರಿಗೇ ಬಿಟ್ಟಿದ್ದು,'' ಎಂದು ಕಚೇರಿ ಕಾರ್ಯದರ್ಶಿ ಹರಿಪಾದ ದಾಸ್‌ ತಿಳಿಸಿದ್ದಾರೆ. ಸಿಎಂ ಆಗಿದ್ದಾಗಲೂ ತಮ್ಮ ವೇತನವನ್ನು ಪಕ್ಷಕ್ಕೆ ನೀಡುತ್ತಿದ್ದ ಸರ್ಕಾರ್‌ ಅವರಿಗೆ ಜೀವನ ನಿರ್ವಹಣೆಗೆಂದು ಪಕ್ಷ ಪ್ರತಿ ತಿಂಗಳು 10,000 ನಿರ್ವಹಣಾ ಭತ್ಯೆ ಮಾತ್ರ ನೀಡುತ್ತಿತ್ತು. ಮಾಣಿಕ್‌ ತಮ್ಮ ಪಿತ್ರಾರ್ಜಿತ ಆಸ್ತಿಯನ್ನು ಸಹೋದರಿಗೆ ಕೊಡುಗೆಯಾಗಿ ನೀಡಿದ್ದಾರೆ. ಸರ್ಕಾರ್‌ ದಂಪತಿಗೆ ಮಕ್ಕಳಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT