ಸುರೇಶ್ ಜೋಷಿ 
ದೇಶ

ಆರ್‏ಎಸ್ಎಸ್ ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ 'ಭಯ್ಯಾಜಿ' ಜೋಶಿ ಪುನರಾಯ್ಕೆ

ಭಯ್ಯಾಜಿ ಎಂದೇ ಪ್ರಸಿದ್ಧರಾದ ಸುರೇಶ್ ಜೋಷಿ, ರಾಷ್ಟ್ರೀಯ ಸ್ವಯಂ ಸೇವಕಾ ಸಂಘದ ( ಆರ್ ಎಸ್ ಎಸ್ ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಇಂದು ಪುನರ್ ಆಯ್ಕೆಯಾಗಿದ್ದಾರೆ.

ನವದೆಹಲಿ: ಭಯ್ಯಾಜಿ ಎಂದೇ ಪ್ರಸಿದ್ಧರಾದ ಸುರೇಶ್ ಜೋಶಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ( ಆರ್ ಎಸ್ ಎಸ್ )  ಪ್ರಧಾನ ಕಾರ್ಯದರ್ಶಿಯಾಗಿ ಇಂದು ಪುನರ್ ಆಯ್ಕೆಯಾಗಿದ್ದಾರೆ.

ಜೋಶಿ,  9 ವರ್ಷಗಳಿಂದಲೂ ವಿವಾದದ ನಡುವೆಯೂ  ಪ್ರಧಾನ ಕಾರ್ಯದರ್ಶಿಯಾಗಿ  ಕಾರ್ಯನಿರ್ವಹಿಸುತ್ತಿದ್ದು,  ಆರ್ ಎಸ್ ಎಸ್ ನ ದಿನನಿತ್ಯದ ವ್ಯವಹಾರ ನೋಡಿಕೊಳ್ಳುತ್ತಿದ್ದಾರೆ.  ಈಗ ಮತ್ತೆ ಮೂರು ವರ್ಷಗಳ ಅವಧಿಗೆ ಅವರನ್ನು ಪುನರ್ ಆಯ್ಕೆ ಮಾಡಲಾಗಿದೆ.

ಆರ್ ಎಸ್ ಎಸ್ ನ ಅಖಿಲ ಭಾರತೀಯ ಪ್ರಾತಿನಿಧಿ ಸಭಾದ  ಎರಡನೇ ದಿನದ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ.ನಾಗಪುರದಲ್ಲಿನ ಹೆಡ್ಗೇವರ್ ಸ್ಮಾರಕ ಸಮಿತಿಯಲ್ಲಿ ಈ ಸಭೆಗೆ  ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು  ನಿನ್ನೆ ಚಾಲನೆ ನೀಡಿದ್ದರು.

ಇಂದಿನ ಕಾರ್ಯಕ್ರಮದಲ್ಲಿ ದೇಶಾದ್ಯಂತ ಆಗಮಿಸಲಿರುವ ಸುಮಾರು ಆಯ್ದ 1.500 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಎಬಿಪಿಎಸ್ ಪ್ರಚಾರ ಪ್ರಮುಖ ಡಾ. ಮನಮೋಹನ್ ವೈದ್ಯ  ತಿಳಿಸಿದ್ದರು.

 ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪ್ರಧಾನ ಕಾರ್ಯದರ್ಶಿಯನ್ನು ಆಯ್ದ ಪ್ರತಿನಿಧಿಗಲು ಆಯ್ಕೆ ಮಾಡಲಿದ್ದಾರೆ ಎಂದು ವೈದ್ಯ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ಹೊಸ ದೂರು ದಾಖಲು, ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ!

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

SCROLL FOR NEXT