ಐಎನ್ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ಚಿದಂಬರಂ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ 
ದೇಶ

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ನ್ಯಾಯಾಂಗ ಬಂಧನ ಅವಧಿ ಮಾ. 24ರವರೆಗೆ ವಿಸ್ತರಣೆ

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಅನಿಂಡ ಬಂಧಿಸಲಾಗಿದ್ದ ಮಾಜಿ ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಮಾ. 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ...

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಅನಿಂಡ ಬಂಧಿಸಲಾಗಿದ್ದ ಮಾಜಿ ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಮಾ. 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಕಾರ್ತಿ ಪರ ವಕೀಲರು ಕಾರ್ತಿ ಚಿದಂಬರಂ ಅವರಿಗೆ ತಿಹಾರ್ ಜೈಲಿನಲ್ಲಿ ಪ್ರತ್ಯೇಕ ಸೆಲ್ ಕೋರಿ ಮನವಿ ಸಲ್ಲಿಸಿದ್ದು ಇದಕ್ಕೆ ನ್ಯಾಯಾಲಯವು ಕಾರ್ತಿ ಅವರು ಜೈಲು ಮಾರ್ಗಸೂಚಿಗಳನ್ನು ಅನುಸರಿಸಬೇಕಾಗುವುದು ಎಂದಿದ್ದಾರೆ
ಹಾಗೆಯೇ ಕಾರ್ತಿ ಅವರ ಜಾಮೀನು ಅರ್ಜಿಯನ್ನು ಶೀಘ್ರವಾಗಿ ವಿಚಾರಣೆಗೆ ತೆಗೆದುಕೊಳ್ಳುವ ಸಂಬಂಧ ನ್ಯಾಯಾಲಯ ಜಾಮೀನು ಅರ್ಜಿಯನ್ನು ಈ ಹಿಂದೆ ನಿಗದಿಗೊಂಡಂತೆ ಮಾ.15ರಂದು ವಿಚಾರಣೆ ನಡೆಸಲಾಗುತ್ತದೆ ಎಂದಿದೆ. ಅಲ್ಲದೆ ಕಾರ್ತಿ ಅವರಿಗೆ ಜೈಲು ವಾಸದ ಸಮಯದಲ್ಲಿ ಮನೆಯ ಆಹಾರ ನೀಡಬೇಕೆನ್ನುವ ಕೋರಿಕೆಯನ್ನು ನ್ಯಾಯಾಲಯ ನಿರಾಕರಿಸಿದೆ. 
ಇದಕ್ಕೂ ಮುನ್ನ ಕಾರ್ತಿ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸುನೀಲ್ ರಾಣಾ ಅವರೆದುರು ಹಾಜರುಪಡಿಸಲಾಗಿತ್ತು.
ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಸಂಬಂಧ ಕಾರ್ತಿ ಚಿದಂಬರಂ ಅವರನ್ನು  ಫೆಬ್ರವರಿ 28ರಂದು ಚೆನ್ನೈ ವಿಮಾನ ನಿಲ್ದಾನದಲ್ಲಿ ಸಿಬಿಐ ವಶಕ್ಕೆ ಪಡೆದಿತ್ತು. ಅಂದಿನಿಂದಲೂ ಅವರು ಸಿಬಿಐ ವಶದಲ್ಲಿ ವಿಚಾರಣೆಗೆ ಒಳಪಟ್ಟಿದ್ದಾರೆ.
ಕಾರ್ತಿ ಚಿದಂಬರಂ ಅವರ ವಿಚಾರಣೆ ವೇಳೆ ಅವರ ತಂದೆ ಪಿ. ಚಿದಂಬರಂ ಅವರೂ ಸಹ ನ್ಯಾಯಾಲಯದಲ್ಲಿ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT