ದೇಶ

ರೈತರ ಹೋರಾಟಕ್ಕೆ ರಾಹುಲ್ ಬೆಂಬಲ; ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹ

Nagaraja AB

ನವದೆಹಲಿ: ಪ್ರಧಾನಿ ನರೇಂದ್ರಮೋದಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಪ್ರತಿಷ್ಠೆ ಬದಿಗೊತ್ತಿ ಮುಂಬೈಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ಬುಡಕಟ್ಟು ಸಮುದಾಯಕ ಕನಿಷ್ಠ ಬೇಡಿಕೆ ಈಡೇರಿಸಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಮುಂಬೈಯಲ್ಲಿನ ರೈತರ ಪ್ರತಿಭಟನೆ ಜನತೆಯ ಶಕ್ತಿಗೆ ಉದಾಹರಣೆಯಂತಿದ್ದು, ಕೇಂದ್ರ ಹಾಗೂ ರಾಜ್ಯಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

 ಪ್ರಧಾನಿ ನರೇಂದ್ರಮೋದಿ ಹಾಗೂ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್  ರೈತರ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸುವುದಾಗಿ ರಾಹುಲ್ ಗಾಂಧಿ ಟ್ವೀಟರ್ ನಲ್ಲಿ ಹೇಳಿಕೆ ನೀಡಿದ್ದಾರೆ.

SCROLL FOR NEXT