ಬಿಜೆಪಿ ಮುಖಂಡ ಸುಬ್ರಹ್ಮಣ್ಯ ಸ್ವಾಮಿ 
ದೇಶ

ರಾಜೀವ್ ಗಾಂಧಿ ಹತ್ಯೆಗೆ ಸುಪಾರಿ ಕೊಟ್ಟಿರಬಹುದು: ಸುಬ್ರಹ್ಮಣ್ಯ ಸ್ವಾಮಿ ಶಂಕೆ, ತನಿಖೆಗೆ ಒತ್ತಾಯ

ತಮ್ಮ ತಂದೆಯನ್ನು ಕೊಂದವರನ್ನು ಕ್ಷಮಿಸಿದ್ದೇವೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ...

ನವದೆಹಲಿ: ತಮ್ಮ ತಂದೆಯನ್ನು ಕೊಂದವರನ್ನು ಕ್ಷಮಿಸಿದ್ದೇವೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ, ರಾಜೀವ್ ಗಾಂಧಿಯವರನ್ನು ಹಣಕಾಸಿನ ಲಾಭಕ್ಕಾಗಿ ಕೊಲೆ ಮಾಡಿರುವ ಅಥವಾ ಸುಪಾರಿ ಕೊಲೆ ಮಾಡಿರುವ ಸಂಶಯವನ್ನು ಹುಟ್ಟುಹಾಕುತ್ತದೆ ಎಂದು ಭಾರತೀಯ ಜನತಾ ಪಾರ್ಟಿಯ ನಾಯಕ ಸುಬ್ರಹ್ಮಣ್ಯ ಸ್ವಾಮಿ ಹೇಳಿದ್ದಾರೆ.

ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಕುರಿತು ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಭಾರತೀಯ ಸೇನೆಯನ್ನು ಶ್ರೀಲಂಕಾಕ್ಕೆ ಎಲ್ ಟಿಟಿಇ ವಿರುದ್ಧ ಹೋರಾಡಲು ಕಳುಹಿಸಿದ್ದಕ್ಕಾಗಿ ರಾಜೀವ್ ಗಾಂಧಿಯವರನ್ನು ಹತ್ಯೆ ಮಾಡಲಾಯಿತು ಎಂದು ಎಲ್ ಟಿಟಿಇ ಹೇಳಿದೆ. ಎಲ್ ಟಿಟಿಇ ವಿರುದ್ಧ ಹೋರಾಡಲು ಶ್ರೀಲಂಕಾ ಸರ್ಕಾರ ಭಾರತ ಸೇನೆಯ ಸಹಾಯ ಕೇಳಿದ್ದಕ್ಕೆ ಸಂಸತ್ತಿನ ಒಪ್ಪಿಗೆ ಪಡೆದೇ ರಾಜೀವ್ ಗಾಂಧಿಯವರು ಸೇನೆಯನ್ನು ಕಳುಹಿಸಿದ್ದರು. ಹೀಗಿರುವಾಗ ಅವರನ್ನು ಹತ್ಯೆ ಮಾಡಲು ಅದೊಂದೇ ಕಾರಣವಾಗಿರಲಿಕ್ಕಿಲ್ಲ ಎಂದು ಸುಬ್ರಹ್ಮಣ್ಯ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಅವರು, ತಮ್ಮ ತಂದೆಯನ್ನು ಹತ್ಯೆ ಮಾಡಿದವರನ್ನು ಕ್ಷಮಿಸಿದ್ದೇವೆ ಎನ್ನುವ ರಾಹುಲ್ ಗಾಂಧಿಯವರ ಹೇಳಿಕೆ ಅವರಲ್ಲಿ ದೇಶಭಕ್ತಿಯ ಕೊರತೆಯನ್ನು ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸುವಂತೆ ಮಾಡಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT