ಸುಷ್ಮಾ ಸ್ವರಾಜ್, 
ದೇಶ

ನಿಮಗೆ ಸ್ವಾಗತ, ಆದರೆ ನಿಮ್ಮ ಹೇಳಿಕೆಗೆ ಅಲ್ಲ: ಬಿಜೆಪಿ ಸೇರಿದ ನರೇಶ್ ಅಗರ್ವಾಲ್ ಕುರಿತು ಸುಷ್ಮಾ ಸ್ವರಾಜ್

ನರೇಶ್ ಅಗರ್ವಾಲ್ ಬಿಜೆಪಿ ಸೇರಿದ್ದಾರೆ, ಅವರಿಗೆ ಸ್ವಾಗತ ಕೋರುತ್ತೇನೆ. ಆದರೆ ಜಯಾ ಬಚ್ಚನ್ ಕುರಿತಂತೆ ಅವರ ಟೀಕೆಯ ಮಾತುಗಳು ಅಸಮರ್ಪಕವಾಗಿದ್ದು, ಸ್ವೀಕಾರಾರ್ಹವಾಗಿಲ್ಲ’

ನವದೆಹಲಿ: "ನರೇಶ್ ಅಗರ್ವಾಲ್ ಬಿಜೆಪಿ ಸೇರಿದ್ದಾರೆ, ಅವರಿಗೆ ಸ್ವಾಗತ ಕೋರುತ್ತೇನೆ. ಆದರೆ ಜಯಾ ಬಚ್ಚನ್ ಕುರಿತಂತೆ ಅವರ ಟೀಕೆಯ ಮಾತುಗಳು ಅಸಮರ್ಪಕವಾಗಿದ್ದು, ಸ್ವೀಕಾರಾರ್ಹವಾಗಿಲ್ಲ’ ಭಾರತ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಸಮಾಜವಾದಿ ಪಕ್ಷದಿಂಡ ರಾಜ್ಯ ಸಭೆಗೆ ಅಭ್ಯರ್ಥಿಯಾಗುವ ಅವಕಾಶವನ್ನು ತಪ್ಪಿಸಿಕೊಂಡಿದ್ದ ನರೇಶ್ ಅಗರ್ವಾಲ್ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಸುಷ್ಮಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಅದೇ ಟ್ವೀಟ್ ನಲ್ಲಿ ಅಗರ್ವಾಲ್ ಹಿಂದೆ ಜಯಾ ಬಚ್ಚನ್ ಬಗೆಗೆ ಆಡಿದ್ದ ಮಾತುಗಳು ತಪ್ಪು ಎಂದೂ ಎಚ್ಚರಿಸಿದ್ದಾರೆ.
ಸಮಾಜವಾದಿ ಪಕ್ಷವು ಅಗರ್ವಾಲ್ ಬದಲಿಗೆ ಜಯಾ ಬಚ್ಚನ್ ಅವರಿಗೆ ರಾಜ್ಯಸಭೆ ಟಿಕೆಟ್ ನಿಡಿತ್ತು. ಇದಕ್ಕೆ ಪ್ರತಿಕ್ರಯಿಸಿದ ನರೇಶ್ ಅಗರ್ವಾಲ್ ’ಚಲನಚಿತ್ರಗಳಲ್ಲಿ ನೃತ್ಯ ಮಾಡುವ, ನಟನೆ ಮಾಡುವವರನ್ನು ಬೆಂಬಲಿಸಿದ ಪಕ್ಷ ನನ್ನನ್ನು ಕಡೆಗಣಿಸಿತು’ ಎಂದಿದ್ದರು.
ಬಿಜೆಪಿ ವಕ್ತಾರರಾದ ಸಂಬಿತ್ ಪಾತ್ರಾ ಮಾತನಾಡಿ ನಮ್ಮ ಪಕ್ಷವು ಎಲ್ಲಾಕ್ಷೇತ್ರಗಳ ಜನರನ್ನು ಗೌರವಿಸಲಿದೆ. ರಾಜಕೀಯಕ್ಕೆ ಅವರನ್ನು ಸ್ವಾಗತಿಸುತ್ತದೆ ''ಎಂದರು. ಈ ಮೂಲಕ ಅಗರ್ವಾಲ್ ಹೇಳಿಕೆಗೆ, ಬಿಜೆಪಿಗೆ ಯಾವ ಸಂಬಂಧವಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT