ಛತ್ತೀಸ್‏ಗಢ: ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ದಾಳಿಗೆ 8 ಸಿಆರ್‏ಪಿಎಫ್ ಸಿಬ್ಬಂದಿ ಹುತಾತ್ಮ 
ದೇಶ

ಛತ್ತೀಸ್‏ಗಢ: ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ದಾಳಿಗೆ 9 ಸಿಆರ್‏ಪಿಎಫ್ ಸಿಬ್ಬಂದಿ ಹುತಾತ್ಮ

ಛತ್ತೀಸ್‏ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ದಾಳಿಯಲ್ಲಿ ಒಂಭತ್ತು ಸಿಆರ್‏ಪಿಎಫ್ ಯೋಧರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನವದೆಹಲಿ: ಛತ್ತೀಸ್‏ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ದಾಳಿಯಲ್ಲಿ ಒಂಭತ್ತು ಸಿಆರ್‏ಪಿಎಫ್  ಯೋಧರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಘಟನೆಯಲ್ಲಿ ಕೆಲವು ಯೋಧರು ಗಾಯಗೊಂಡಿದ್ದಾರೆಂದು ವರದಿಯಾಗಿದ್ದು ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ
ಕಳೆದ ಆರು ತಿಂಗಳ ಹಿಂದೆ ಮಾವೋವಾದಿ ನಕ್ಸಲರುನಡೆಸಿದ್ದ ಮಾರಣಾಂತಿಕ ದಾಳಿಯಲ್ಲಿ 25 ಸಿಆರ್‏ಪಿಎಫ್  ಜವಾನರು ಸಾವನ್ನಪ್ಪಿದ್ದರು. ಇದೀಗ ಮತ್ತೆ ಅದೇ ರೀತಿಯ ದಾಳಿ ನಡೆದಿದೆ. ಕಳೆದ ಸೆಪ್ಟೆಂಬರ್ ನಲ್ಲಿ ಸುಕ್ಮಾ ಜಿಲ್ಲೆಯ ನಕ್ಸಲ್ ಪ್ರಾಬಲ್ಯದ ಪ್ರದೇಶದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾಮಗಾರಿ ಸುರಕ್ಷ್ತಾ ದೃಷ್ಟಿಯಿಂದ ಯೋಧರನ್ನು ನೇಮಕ ಮಾಡಲಾಗಿತ್ತು. ಆಗ 300-400 ಎಡಪಂಥೀಯ ದಂಗೆಕೋರರು ದಾಳಿ ನಡೆಸಿದ್ದು ಸಿಆರ್‏ಪಿಎಫ್  ಯೋಧರನ್ನು ಕೊಂದು ಹಾಕಿದ್ದರು.
ಇದೇ ಅಲ್ಲದೆ ಕಳೆದ ಮಾರ್ಚ್ ನಲ್ಲಿ ಸಹ ಸುಕ್ಮಾ ಜಿಲ್ಲೆಯಲ್ಲಿ 12 ಸಿಆರ್‏ಪಿಎಫ್  ಯೋಧರು ನಕ್ಸಲ್ ದಾಳಿಗೆ ತುತ್ತಾಗಿದ್ದರು.
ಇಷ್ಟಾಗಿಯೂ ನಕ್ಸಲ್ ಹಾಗೂ ಯೋಧರ ನಡುವಿನ ಸಂಘರ್ಷಗಳಲ್ಲಿ ಯೋಧರು ಸಾಕಷ್ಟು ಯಶ ಕಂಡಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಛತ್ತೀಸ್‏ಗಢದಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್ ಪ್ರಕರಣಗಳಲ್ಲಿ 300 ಕ್ಕೂ ಅಧಿಕ ನಕ್ಸಲರನ್ನು ಕೊಲ್ಲಲಾಗಿದೆ ಎಂದು ಮಧ್ಯ ಪ್ರದೇಶ ಗೃಹ ಸಚಿವ ರಾಮ್ ಸೇವಕ್ ಪೈಕ್ರಾ ಇತ್ತೀಚೆಗಷ್ಟೆ ವಿಧಾನಸಭೆಯಲ್ಲಿ ತಿ:ಳಿಸಿದ್ದರು.
ಮಾವೋವಾದಿಗಳ ಹಿಡಿತದಲ್ಲಿರುವ ಛತ್ತೀಸ್‏ಗಢದ ಅಬುಜ್ಮಾದ್ ಅರಣ್ಯ ಪ್ರದೇಶದಲ್ಲಿ ಸಿಆರ್‏ಪಿಎಫ್  ಪಡೆ ಮೂರು ಶಾಶ್ವತ ಶಿಬಿರಗಳನ್ನು ಈ ತಿಂಗಳ  ಪ್ರಾರಂಭದಲ್ಲಿ\ ಸ್ಥಾಪಿಸಲಾಗಿತ್ತು. ಹೀಗೆ ಸ್ಥಾಪಿತವಾದ ಪ್ರತಿ ಕ್ಯಾಂಪ್ ಗಳಲ್ಲಿ ಕನಿಷ್ಟ ನೂರು ಸಿಬ್ಬಂದಿಗಳಿರುತ್ತಿದ್ದರು.
ನಕ್ಸಲ್ ಕಾರ್ಯಾಚರಣೆ ತಡೆಗಟ್ಟುವ ಸಲುವಾಗಿ ಸಿಆರ್‏ಪಿಎಫ್  ಹಾಗೂ ಇತರೆ ಭದ್ರತಾ ಪಡೆಗಳು ನಡೆಸುವ ’ಆಪರೇಷನ್ ಮಾಧ್’ ನ ಭಾಗವಾಗಿ ಈ ಶಿಬಿರಗಳನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT