ಛತ್ತೀಸ್‏ಗಢ: ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ದಾಳಿಗೆ 8 ಸಿಆರ್‏ಪಿಎಫ್ ಸಿಬ್ಬಂದಿ ಹುತಾತ್ಮ 
ದೇಶ

ಛತ್ತೀಸ್‏ಗಢ: ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ದಾಳಿಗೆ 9 ಸಿಆರ್‏ಪಿಎಫ್ ಸಿಬ್ಬಂದಿ ಹುತಾತ್ಮ

ಛತ್ತೀಸ್‏ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ದಾಳಿಯಲ್ಲಿ ಒಂಭತ್ತು ಸಿಆರ್‏ಪಿಎಫ್ ಯೋಧರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನವದೆಹಲಿ: ಛತ್ತೀಸ್‏ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ದಾಳಿಯಲ್ಲಿ ಒಂಭತ್ತು ಸಿಆರ್‏ಪಿಎಫ್  ಯೋಧರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಘಟನೆಯಲ್ಲಿ ಕೆಲವು ಯೋಧರು ಗಾಯಗೊಂಡಿದ್ದಾರೆಂದು ವರದಿಯಾಗಿದ್ದು ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ
ಕಳೆದ ಆರು ತಿಂಗಳ ಹಿಂದೆ ಮಾವೋವಾದಿ ನಕ್ಸಲರುನಡೆಸಿದ್ದ ಮಾರಣಾಂತಿಕ ದಾಳಿಯಲ್ಲಿ 25 ಸಿಆರ್‏ಪಿಎಫ್  ಜವಾನರು ಸಾವನ್ನಪ್ಪಿದ್ದರು. ಇದೀಗ ಮತ್ತೆ ಅದೇ ರೀತಿಯ ದಾಳಿ ನಡೆದಿದೆ. ಕಳೆದ ಸೆಪ್ಟೆಂಬರ್ ನಲ್ಲಿ ಸುಕ್ಮಾ ಜಿಲ್ಲೆಯ ನಕ್ಸಲ್ ಪ್ರಾಬಲ್ಯದ ಪ್ರದೇಶದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾಮಗಾರಿ ಸುರಕ್ಷ್ತಾ ದೃಷ್ಟಿಯಿಂದ ಯೋಧರನ್ನು ನೇಮಕ ಮಾಡಲಾಗಿತ್ತು. ಆಗ 300-400 ಎಡಪಂಥೀಯ ದಂಗೆಕೋರರು ದಾಳಿ ನಡೆಸಿದ್ದು ಸಿಆರ್‏ಪಿಎಫ್  ಯೋಧರನ್ನು ಕೊಂದು ಹಾಕಿದ್ದರು.
ಇದೇ ಅಲ್ಲದೆ ಕಳೆದ ಮಾರ್ಚ್ ನಲ್ಲಿ ಸಹ ಸುಕ್ಮಾ ಜಿಲ್ಲೆಯಲ್ಲಿ 12 ಸಿಆರ್‏ಪಿಎಫ್  ಯೋಧರು ನಕ್ಸಲ್ ದಾಳಿಗೆ ತುತ್ತಾಗಿದ್ದರು.
ಇಷ್ಟಾಗಿಯೂ ನಕ್ಸಲ್ ಹಾಗೂ ಯೋಧರ ನಡುವಿನ ಸಂಘರ್ಷಗಳಲ್ಲಿ ಯೋಧರು ಸಾಕಷ್ಟು ಯಶ ಕಂಡಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಛತ್ತೀಸ್‏ಗಢದಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್ ಪ್ರಕರಣಗಳಲ್ಲಿ 300 ಕ್ಕೂ ಅಧಿಕ ನಕ್ಸಲರನ್ನು ಕೊಲ್ಲಲಾಗಿದೆ ಎಂದು ಮಧ್ಯ ಪ್ರದೇಶ ಗೃಹ ಸಚಿವ ರಾಮ್ ಸೇವಕ್ ಪೈಕ್ರಾ ಇತ್ತೀಚೆಗಷ್ಟೆ ವಿಧಾನಸಭೆಯಲ್ಲಿ ತಿ:ಳಿಸಿದ್ದರು.
ಮಾವೋವಾದಿಗಳ ಹಿಡಿತದಲ್ಲಿರುವ ಛತ್ತೀಸ್‏ಗಢದ ಅಬುಜ್ಮಾದ್ ಅರಣ್ಯ ಪ್ರದೇಶದಲ್ಲಿ ಸಿಆರ್‏ಪಿಎಫ್  ಪಡೆ ಮೂರು ಶಾಶ್ವತ ಶಿಬಿರಗಳನ್ನು ಈ ತಿಂಗಳ  ಪ್ರಾರಂಭದಲ್ಲಿ\ ಸ್ಥಾಪಿಸಲಾಗಿತ್ತು. ಹೀಗೆ ಸ್ಥಾಪಿತವಾದ ಪ್ರತಿ ಕ್ಯಾಂಪ್ ಗಳಲ್ಲಿ ಕನಿಷ್ಟ ನೂರು ಸಿಬ್ಬಂದಿಗಳಿರುತ್ತಿದ್ದರು.
ನಕ್ಸಲ್ ಕಾರ್ಯಾಚರಣೆ ತಡೆಗಟ್ಟುವ ಸಲುವಾಗಿ ಸಿಆರ್‏ಪಿಎಫ್  ಹಾಗೂ ಇತರೆ ಭದ್ರತಾ ಪಡೆಗಳು ನಡೆಸುವ ’ಆಪರೇಷನ್ ಮಾಧ್’ ನ ಭಾಗವಾಗಿ ಈ ಶಿಬಿರಗಳನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT