ಮಿಲಿಂದ್ ಎಕ್ಬೋಟೆ 
ದೇಶ

ಭೀಮಾ ಕೊರೇಗಾಂವ್ ಹಿಂಸಾಚಾರ: ಪ್ರಮುಖ ಆರೋಪಿ ಮಿಲಿಂದ್ ಎಕ್ಬೋಟೆ ಬಂಧನ

ಭೀಮಾ ಕೊರೇಗಾಂವ್ ಹಿಂಸಾಚಾರ ಪ್ರಕರಣದ ಪ್ರಮುಖದಲ್ಲಿ ಆರೋಪಿಯಾಗಿರುವ ಮಿಲಿಂದ್ ಎಕ್ಬೋಟೆ'ನ್ನು ಪುಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ...

ಪುಣೆ: ಭೀಮಾ ಕೊರೇಗಾಂವ್ ಹಿಂಸಾಚಾರ ಪ್ರಕರಣದ ಪ್ರಮುಖದಲ್ಲಿ ಆರೋಪಿಯಾಗಿರುವ ಮಿಲಿಂದ್ ಎಕ್ಬೋಟೆ'ನ್ನು ಪುಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 
ಭೀಮಾ ಕೊರೇಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಎಕ್ಬೋಟೆ ನಿರೀಕ್ಷಣಾ ಜಾಮೀನು ನೀಡುವಂತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ. ಈ ಕುರಿತ ಅರ್ಜಿಯನ್ನು ಇಂದು ಪರಿಶೀಲನೆ ನಡೆಸಿದ್ದ ಸುಪ್ರೀಂಕೋರ್ಟ್, ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. 
ಇದರ ಬೆನ್ನಲ್ಲೇ ಇದೀಗ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಮಿಲಿಂದ್ ಎಕ್ಬೋಟೆಯನ್ನು ಪುಣೆಯ ಶಿವಾಜಿನಗರದಲ್ಲಿರುವ ಆತನ ನಿವಾಸದಲ್ಲಿಯೇ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. 
 ಭೀಮಾ ಕೋರೆಗಾಂವ್ ಯುದ್ಧದಲ್ಲಿ ದಲಿತರನ್ನು ಒಳಗೊಂಡ ಬ್ರಿಟಿಷ್ ಸೇನೆಯು ಮೇಲ್ಜಾತಿಯವರನ್ನು ಒಳಗೊಂಡ ಪೇಶ್ವೆ ಸೇನೆಯನ್ನು ಸೋಲಿಸಿದ ಸ್ಮರಣಾರ್ಥ ಜ.1 ರಂದು ಆಯೋಜಿಸಿದ್ದ 200ನೇ ವಿಜಯೋತ್ಸವದ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿಗಳು ಹಾನಿಗೊಳಗಾಗಿತ್ತು. 
ಪ್ರಕರಣ ಸಂಬಂಧ ಪುಣೆ ಪೊಲೀಸರು ಎಕ್ಬೋಟೆ ಹಾಗೂ ಮತ್ತೊಬ್ಬ ನಾಯಕ ಸಂಭಜಿ ಭಿಡೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. 
ಘಟನೆ ಬಳಿಕ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರುದ್ಧ ವಿರೋಧ ಪಕ್ಷಗಳು ಗಂಭೀರ ಆರೋಪಗಳನ್ನು ಮಾಡಿದ್ದವು. ಹಿಂಸಾಚಾರದ ಬಳಿಕವೂ ಪ್ರಕರಣದ ಪ್ರಮುಖ ಆರೋಪಿಗಳಾಗಿರುವ ಮಿಲಿಂದ್ ಎಕ್ಬೋಬೆ ಹಾಗೂ ಎಕ್ತಾ ಅಘಾದಿಯವರನ್ನು ಫಡ್ನವೀಸ್ ಸ್ವತಂತ್ರರಾಗಿ ಓಡಾಡುವಂತೆ ಮಾಡಿದ್ದಾರೆಂದು ಆರೋಪ ಮಾಡಿದ್ದವು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT