ಮಾಜಿ ಕೇಂದ್ರ ಸಚಿವ ದಯಾನಿಧಿ ಮಾರನ್ 
ದೇಶ

ಟೆಲಿಫೋನ್ ಎಕ್ಸ್ ಚೇಂಜ್ ಹಗರಣ: ಮಾರನ್ ಸಹೋದರರು ದೋಷಮುಕ್ತ

ಟೆಲಿಫೋನ್ ಎಕ್ಸ್ ಚೇಂಜ್ ಹಗರಣದ ಆರೋಪ ಎದುರಿಸುತ್ತಿದ್ದ ಮಾಜಿ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಹಾಗೂ ಅವರ ಸಹೋದರ ಕಲಾನಿಧಿ ಮಾರನ್ ಸಹೋದರರನ್ನು ಸಿಬಿಐ ನ ವಿಶೇಷ ಕೋರ್ಟ್

ನವದೆಹಲಿ: ಟೆಲಿಫೋನ್ ಎಕ್ಸ್ ಚೇಂಜ್ ಹಗರಣದ ಆರೋಪ ಎದುರಿಸುತ್ತಿದ್ದ ಮಾಜಿ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಹಾಗೂ ಅವರ ಸಹೋದರ ಕಲಾನಿಧಿ ಮಾರನ್ ಸಹೋದರರನ್ನು ಸಿಬಿಐ ನ ವಿಶೇಷ ಕೋರ್ಟ್ ದೋಷಮುಕ್ತಗೊಳಿಸಿದೆ. 
ಆರೋಪಿಗಳ ವಿರುದ್ಧ ಮೇಲ್ನೋಟಕ್ಕೆ ಅಪರಾಧ ಸಾಬೀತಾಗುವ ಸಾಕ್ಷ್ಯಗಳು ಇಲ್ಲದ ಕಾರಣ ವಿಶೇಷ ಕೋರ್ಟ್ ನ ನ್ಯಾಯಮೂರ್ತಿ ನಟರಾಜನ್ ಪ್ರಕರಣದ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿದ್ದಾರೆ.  2018 ರ ಫೆಬ್ರವರಿ ತಿಂಗಳಲ್ಲಿ ದಯಾನಿಧಿ ಮಾರನ್, ಕಲಾನಿಧಿ ಮಾರನ್ ತಮ್ಮನ್ನು ಪ್ರಕರಣದಿಂದ ವಜಾಗೊಳಿಸಬೇಕೆಂದು ಕೋರಿದ್ದ ಅರ್ಜಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿತ್ತು. 
ಮಾರನ್ ಸಹೋದರರ ವಿರುದ್ಧ, ಸನ್ ಟಿವಿ ಡಾಟಾಗೆ ಅಕ್ರಮವಾಗಿ ಅಪ್ ಲಿಂಕ್ ಕಲ್ಪಿಸಲು 764 ಟೆಲಿಫೋನ್ ಲೈನ್ ಗಳನ್ನು ದುರ್ಬಳಕೆ ಮಾಡಿ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಸಂಸ್ಥೆಗೆ 1.78 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದ ಆರೋಪ ಕೇಳಿಬಂದಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?