ಮಾಜಿ ಕೇಂದ್ರ ಸಚಿವ ದಯಾನಿಧಿ ಮಾರನ್ 
ದೇಶ

ಟೆಲಿಫೋನ್ ಎಕ್ಸ್ ಚೇಂಜ್ ಹಗರಣ: ಮಾರನ್ ಸಹೋದರರು ದೋಷಮುಕ್ತ

ಟೆಲಿಫೋನ್ ಎಕ್ಸ್ ಚೇಂಜ್ ಹಗರಣದ ಆರೋಪ ಎದುರಿಸುತ್ತಿದ್ದ ಮಾಜಿ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಹಾಗೂ ಅವರ ಸಹೋದರ ಕಲಾನಿಧಿ ಮಾರನ್ ಸಹೋದರರನ್ನು ಸಿಬಿಐ ನ ವಿಶೇಷ ಕೋರ್ಟ್

ನವದೆಹಲಿ: ಟೆಲಿಫೋನ್ ಎಕ್ಸ್ ಚೇಂಜ್ ಹಗರಣದ ಆರೋಪ ಎದುರಿಸುತ್ತಿದ್ದ ಮಾಜಿ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಹಾಗೂ ಅವರ ಸಹೋದರ ಕಲಾನಿಧಿ ಮಾರನ್ ಸಹೋದರರನ್ನು ಸಿಬಿಐ ನ ವಿಶೇಷ ಕೋರ್ಟ್ ದೋಷಮುಕ್ತಗೊಳಿಸಿದೆ. 
ಆರೋಪಿಗಳ ವಿರುದ್ಧ ಮೇಲ್ನೋಟಕ್ಕೆ ಅಪರಾಧ ಸಾಬೀತಾಗುವ ಸಾಕ್ಷ್ಯಗಳು ಇಲ್ಲದ ಕಾರಣ ವಿಶೇಷ ಕೋರ್ಟ್ ನ ನ್ಯಾಯಮೂರ್ತಿ ನಟರಾಜನ್ ಪ್ರಕರಣದ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿದ್ದಾರೆ.  2018 ರ ಫೆಬ್ರವರಿ ತಿಂಗಳಲ್ಲಿ ದಯಾನಿಧಿ ಮಾರನ್, ಕಲಾನಿಧಿ ಮಾರನ್ ತಮ್ಮನ್ನು ಪ್ರಕರಣದಿಂದ ವಜಾಗೊಳಿಸಬೇಕೆಂದು ಕೋರಿದ್ದ ಅರ್ಜಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿತ್ತು. 
ಮಾರನ್ ಸಹೋದರರ ವಿರುದ್ಧ, ಸನ್ ಟಿವಿ ಡಾಟಾಗೆ ಅಕ್ರಮವಾಗಿ ಅಪ್ ಲಿಂಕ್ ಕಲ್ಪಿಸಲು 764 ಟೆಲಿಫೋನ್ ಲೈನ್ ಗಳನ್ನು ದುರ್ಬಳಕೆ ಮಾಡಿ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಸಂಸ್ಥೆಗೆ 1.78 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದ ಆರೋಪ ಕೇಳಿಬಂದಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT