ಸುಪ್ರೀಂ ಕೋರ್ಟ್ 
ದೇಶ

ರಾಜ್ಯಗಳು ಹೋಂ ಗಾರ್ಡ್ಸ್ ವೇತನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಆದೇಶ ಪಾಲಿಸುತ್ತಿಲ್ಲ: ಸಂಸದೀಯ ಸಮಿತಿ

ಹೋಂ ಗಾರ್ಡ್ ಗಳ ಕರ್ತವ್ಯ ಭತ್ಯೆ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಬಹುತೇಕ ಎಲ್ಲಾ ರಾಜ್ಯಗಳು ಮತ್ತು ಕೇಂದ್ರ....

ನವದೆಹಲಿ: ಹೋಂ ಗಾರ್ಡ್ ಗಳ ಕರ್ತವ್ಯ ಭತ್ಯೆ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಬಹುತೇಕ ಎಲ್ಲಾ ರಾಜ್ಯಗಳು ಮತ್ತು ಕೇಂದ್ರ ಆಡಳಿತ ಪ್ರದೇಶಗಳು ಉದ್ದೇಶಪೂರ್ವಕವಾಗಿಯೇ ಸುಪ್ರೀಂ ಕೋರ್ಟ್ ಆದೇಶವನ್ನು ಜಾರಿಗೊಳಿಸುತ್ತಿಲ್ಲ ಎಂದು ಸಂಸದೀಯ ಸಮಿತಿ ಹೇಳಿದೆ.
ಕೇವಲ ಐದು ರಾಜ್ಯಗಳ ಮಾತ್ರ ಪೊಲೀಸ ಸಿಬ್ಬಂದಿ ನೀಡುವ ರೀತಿ ಮೂಲವೇತನದ ಮೇಲಿನ ಕರ್ತವ್ಯ ಭತ್ಯೆಯನ್ನು ಹೆಚ್ಚಿಸಿವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ನೇತೃತ್ವದ ಗೃಹ ವ್ಯವಹಾರಕ್ಕೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿ ತಿಳಿಸಿದೆ.
ಈ ಕುರಿತು ಚಿದಂಬರಂ ನೇತೃತ್ವದ ಸ್ಥಾಯಿ ಸಮಿತಿ ಇಂದು ಸಂಸತ್ತಿಗೆ ತನ್ನ ವರದಿ ಸಲ್ಲಿಸಿದ್ದು, ಹೋಂ ಗಾರ್ಡ್ ಗಳ ಕರ್ತವ್ಯ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಐದು ರಾಜ್ಯಗಳನ್ನು ಹೊರತುಪಡಿಸಿ ಇತರೆ ರಾಜ್ಯಗಳು ಸುಪ್ರೀಂ ಕೋರ್ಟ್ ಆದೇಶ ಪಾಲಿಸದಿರುವುದುರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಲಾಗಿದೆ.
ಕೇಂದ್ರ ಗೃಹ ಇಲಾಖೆ ಪದೇಪದೆ ಸೂಚಿಸಿದರೂ ರಾಜ್ಯಗಳು ಉದ್ದೇಶಪೂರ್ವಕವಾಗಿಯೇ ಸುಪ್ರೀಂ ಆದೇಶ ಪಾಲಿಸುತ್ತಿಲ್ಲ ಎಂದು ಸ್ಥಾಯಿ ಸಮಿತಿ ದೂರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT