ಕೇಂದ್ರ ಸರ್ಕಾರ 
ದೇಶ

ನೀರವ್, ಮಲ್ಯ ಮಾತ್ರವಲ್ಲ, ಕನಿಷ್ಠ 31 ಉದ್ಯಮಿಗಳು ಹಗರಣಗಳ ನಂತರ ದೇಶ ಬಿಟ್ಟು ಹೋಗಿದ್ದಾರೆ!

91 ಸುಸ್ತಿದಾರರಿಗೆ ಭಾರತ ಬಿಟ್ಟು ತೆರಳುವುದಕ್ಕೆ ನಿರ್ಬಂಧ ವಿಧಿಸುವ ಆಯ್ಕೆಯನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿರುವ ನಡುವೆಯೇ ಒಟ್ಟು 31 ಆರ್ಥಿಕ ಅಪರಾಧಿಗಳು ಈಗಾಗಲೇ ಭಾರತದಿಂದ ವಿದೇಶಕ್ಕೆ

ನವದೆಹಲಿ: 91 ಸುಸ್ತಿದಾರರಿಗೆ ಭಾರತ ಬಿಟ್ಟು ತೆರಳುವುದಕ್ಕೆ ನಿರ್ಬಂಧ ವಿಧಿಸುವ ಆಯ್ಕೆಯನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿರುವ ನಡುವೆಯೇ ಒಟ್ಟು 31 ಆರ್ಥಿಕ ಅಪರಾಧಿಗಳು ಈಗಾಗಲೇ ಭಾರತದಿಂದ ವಿದೇಶಕ್ಕೆ ಹಾರಿದ್ದಾರೆ. 
ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಈ ಅಂಶವನ್ನು ಬಹಿರಂಗಪಡಿಸಿದ್ದು, ನೀರವ್ ಮೋದಿ ಸೇರಿದಂತೆ ಒಟ್ಟು 31 ಆರ್ಥಿಕ ಅಪರಾಧಿಗಳು ಈಗಾಗಲೇ ವಿದೇಶಗಳಿಗೆ ತೆರಳಿದ್ದಾರೆ ಎಂದು ಹೇಳಿದೆ.  ವಿದೇಶಾಂಗ ಇಲಾಖೆ ರಾಜ್ಯ ಸಚಿವ ಎಂಜೆ ಅಕ್ಬರ್ ಈ ಬಗ್ಗೆ ಮಾಹಿತಿ ನೀಡಿದ್ದು, ಯಾವಾಗಿನಿಂದ ಈ ಎಲ್ಲಾ ಆರ್ಥಿಕ ಅಪರಾಧಿಗಳು ದೇಶ ಬಿಟ್ಟು ಹೋಗಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ. 
ಸಿಬಿಐ ನಿಂದ ಈ ಎಲ್ಲಾ ಆರೋಪಿಗಳ ಹಸ್ತಾಂತರಕ್ಕೆ ಮನವಿ ಬಂದಿದ್ದು, ವಿದೇಶಗಳಿಗೆ ಅಪರಾಧಿಗಳನ್ನು ಹಸ್ತಾಂತರಿಸುವಂತೆ ಕೋರಿಕೆ ಸಲ್ಲಿಸಲಾಗಿದೆ ಎಂದು ಎಂಜೆ ಅಕ್ಬರ್ ಲೋಕಸಭೆಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT