ಹತ್ತನೇ ತರಗತಿ ಪರೀಕ್ಷೆ ಮುಗಿಸಿ ಬಂದು ತಂದೆ ಅಂತ್ಯಸಂಸ್ಕಾರ ಮಾಡಿದ! 
ದೇಶ

ಹತ್ತನೇ ತರಗತಿ ಪರೀಕ್ಷೆ ಮುಗಿಸಿ ಬಂದು ತಂದೆ ಅಂತ್ಯಸಂಸ್ಕಾರ ಮಾಡಿದ ಬಾಲಕ!

ಹತ್ತನೇ ತರಗತಿ ಪರೀಕ್ಷೆಗಳು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುತ್ತದೆ.

ಸೂರತ್ (ಗುಜರಾತ್): ಹತ್ತನೇ ತರಗತಿ ಪರೀಕ್ಷೆಗಳು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುತ್ತದೆ. ಆ ಸಮಯದಲ್ಲಿ ಪೋಷಕರು ಸಹ ತಮ್ಮ ಮಕ್ಕಳಿಗೆ ಯಾವ ತೊಂದರೆಯಾಗದಂತೆ, ಅವರು ಓದುವುದಕ್ಕೆ ಅನುಕೂಲ ಕಲ್ಪಿಸಿಕೊಡುತ್ತಾರೆ. 
ಆದರೆ ಗುಜರಾತ್ ಸೂರತ್ ನಲ್ಲಿನ  ವಿದ್ಯಾರ್ಥಿಯೊಬ್ಬನ ಬಾಳಿನಲ್ಲಿ ಪರೀಕ್ಷೆ ವೇಳೆಯಲ್ಲೇ ಅನಿರೀಕ್ಷಿತ ಆಘಾತ ಬಂದೆರಗಿತ್ತು.   ಹರೀಶ್‌ ಮನೋಹರ್ ಹತ್ತನೇ ತರಗತಿ ಪರೀಕ್ಷೆ ಬರೆಯಬೇಕಿತ್ತು. ಆದರೆ ಅದೇ ವೇಳೆ ಆತನ ತಂದೆ ರಾಜ್‌ಕುಮಾರ್‌ಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದರು.
ಅಪ್ಪನ ಸಾವಿನ ಸುದ್ದಿ ಹರಿಶ್ ಗೆ ಅಪಾರ ದುಃಖ ತಂದಿತ್ತಾದರೂ ಅಂದಿನ ಪರೀಕ್ಷೆಗೆ ಅವನು ಗೈರಾಗಲಿಲ್ಲ. ಆತ ತಾನು ಪರೀಕ್ಷೆ ಬರೆದು ಬಂದ ಬಳಿಕ ತಂದೆಯ ಅಂತಿಮ ಸಂಸ್ಕಾರದ ವಿಧಿಗಳನ್ನು ಪೂರೈಸಿದ್ದಾನೆ.
ತಂದೆ ಸಾವಿನಿಂದ ಮನನೊಂದಿದ್ದ ಹರೀಶ್ ಗೆ ಅವನ ನೆರೆಮನೆಯಲ್ಲಿ ವಾಸವಿದ್ದ ಕೃಷ್ಣಾಕುಂಜ್ ಪರೀಕ್ಷೆ ಬರೆದು ಬರುವಂತೆ ಹೇಳಿದ್ದಾರೆ. ಅದರಂತೆ ಅವನು ಬೋರ್ಡ್ ಪರೀಕ್ಷೆ ಬರೆದು ಬಂದಿದ್ದಾನೆ. ಆದರೆ ಪರೀಕ್ಷೆ ಮುಗಿಯಲು ಹತ್ತು ನಿಮಿಷ ಇರುವಾಗ ಹರೀಶ್‌ಗೆ ದುಃಖ ತಡೆಯಲಾಗಲಿಲ್ಲ, ಪರೀಕ್ಷಾ ಕೊಠಡಿಯಲ್ಲಿಯೇ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ.  ಆಗ ಅಲ್ಲಿದ್ದ  ಶಿಕ್ಷಕರು ಸಮಧಾನದ ಮಾತು ಹೇಳಿ ಧೈರ್ಯ ತುಂಬಿದ್ದಾರೆ.
ಎಂತಹಾ ದುಃಖದಲ್ಲಿಯೂ ವಿದ್ಯಾರ್ಥಿ ದೆಸೆಯ ಪ್ರಮುಖ ಘಟ್ಟವಾದ ಹತ್ತನೇ ತರಗತಿ ಪರೀಕ್ಷೆ ಬರೆದು ಬಂದ ವಿದ್ಯಾರ್ಥಿಯ ನಡೆ ಎಲ್ಲರೂ ಮೆಚ್ಚುವಂತಹುದು ಎನ್ನುವುದು ಸತ್ಯ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT