ಪಿಎನ್ ಬಿ ಎಫೆಕ್ಟ್: 91 ಸುಸ್ತಿದಾರರಿಗೆ ಭಾರತ ಬಿಟ್ಟು ತೆರಳುವುದಕ್ಕೆ ನಿರ್ಬಂಧ? 
ದೇಶ

ಪಿಎನ್ ಬಿ ಎಫೆಕ್ಟ್: 91 ಸುಸ್ತಿದಾರರಿಗೆ ಭಾರತ ಬಿಟ್ಟು ತೆರಳುವುದಕ್ಕೆ ನಿರ್ಬಂಧ?

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪರಿಣಾಮವೇನೋ ಎಂಬಂತೆ ಕೇಂದ್ರ ಸರ್ಕಾರ ಬೃಹತ್ ಮೊತ್ತದ ಸಾಲ ಮರುಪಾವತಿ ಮಾಡಬೇಕಿರುವ 91 ಸುಸ್ತಿದಾರರಿಗೆ ಭಾರತ ಬಿಟ್ಟು ತೆರಳುವುದಕ್ಕೆ ನಿರ್ಬಂಧ ವಿಧಿಸುವ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪರಿಣಾಮವೇನೋ ಎಂಬಂತೆ ಕೇಂದ್ರ ಸರ್ಕಾರ ಬೃಹತ್ ಮೊತ್ತದ ಸಾಲ ಮರುಪಾವತಿ ಮಾಡಬೇಕಿರುವ 91 ಸುಸ್ತಿದಾರರಿಗೆ ಭಾರತ ಬಿಟ್ಟು ತೆರಳುವುದಕ್ಕೆ ನಿರ್ಬಂಧ ವಿಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 
ದೇಶ ಬಿಟ್ಟು ತೆರಳುವುದಕ್ಕೆ ನಿರ್ಬಂಧಕ್ಕೊಳಪಡುವವರ ಹೆಸರಿನ ಪಟ್ಟಿಯನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿದ್ದು, 91 ಜನರ ಹೆಸರಿದೆ ಎಂದು ಹೇಳಲಾಗಿದೆ. ದೇಶಬಿಟ್ಟು ತೆರಳದಂತೆ ನಿರ್ಬಂಧ ವಿಧಿಸುವುದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪ್ರಾರಂಭಿಸುವಂತೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆದೇಶ ನೀಡಿದ್ದು, 50 ಕೋಟಿಗೂ ಹೆಚ್ಚು ಮೊತ್ತದ ಸಾಲ ಮರುಪಾವತಿ ಮಾಡಬೇಕಿರುವವರ ಪಾಸ್ಪೋರ್ಟ್ ಮಾಹಿತಿಯನ್ನು ಹಂಚಿಕೊಳ್ಳುವಂತೆ ಸೂಚನೆ ನೀಡಿದೆ. 
ನೀರವ್ ಮೋದಿ ಪ್ರಕರಣದ ನಂತರ ಕಾರ್ಪೊರೇಟ್ ಸಂಸ್ಥೆಗಳು ಹಾಗೂ ಅದರ ಮಾಲಿಕರಿಗೆ ಬ್ಯಾಂಕ್ ಗಳು ಬೃಹತ್ ಮೊತ್ತದ ಸಾಲ ನೀಡಿ ಮರಳಿ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ಟೀಕೆ ವ್ಯಕ್ತವಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT