ಸಂಗ್ರಹ ಚಿತ್ರ 
ದೇಶ

ಉಪ ಚುನಾವಣೆ ಸೋಲಿಗೆ ಪ್ರಧಾನಿ ಮೋದಿ ಅಹಂಕಾರವೇ ಕಾರಣ: ಶತೃಘ್ನ ಸಿನ್ಹಾ

ಉತ್ತರ ಪ್ರದೇಶ, ಬಿಹಾರ ಉಪ ಚುನಾವಣೆಗಳ ಬಿಜೆಪಿ ಸೋಲಿಗೆ ಪ್ರಧಾನಿ ಮೋದಿ ಅವರ ಅಹಂಕಾರವೇ ಕಾರಣ ಎಂದು ಹಿರಿಯ ನಟ ಹಾಗೂ ಬಿಜೆಪಿ ಸಂಸದ ಶತೃಘ್ನ ಸಿನ್ಹಾ ಹೇಳಿದ್ದಾರೆ.

ನವದೆಹಲಿ: ಉತ್ತರ ಪ್ರದೇಶ, ಬಿಹಾರ ಉಪ ಚುನಾವಣೆಗಳ ಬಿಜೆಪಿ ಸೋಲಿಗೆ ಪ್ರಧಾನಿ ಮೋದಿ ಅವರ ಅಹಂಕಾರವೇ ಕಾರಣ ಎಂದು ಹಿರಿಯ ನಟ ಹಾಗೂ ಬಿಜೆಪಿ ಸಂಸದ ಶತೃಘ್ನ ಸಿನ್ಹಾ ಹೇಳಿದ್ದಾರೆ.
ಉತ್ತರ ಪ್ರದೇಶ, ಬಿಹಾರ ಉಪ ಚುನಾವಣಾ ಫಲಿತಾಂಶ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿ ಬಿಜೆಪಿ ಪಕ್ಷದ ಸೋಲಿಗೆ ಆಕ್ರೋಶ ವ್ಯಕ್ತಪಡಿಸಿರುವ ನಟ ಹಾಗೂ ಬಿಜೆಪಿ ಸಂಸದ ಶತೃಘ್ನ ಸಿನ್ಹಾ, ಉಪ ಚುನಾವಣೆ ಸೋಲಿಗೆ ಪ್ರಧಾನಿ ಮೋದಿ ಅಹಂಕಾರವೇ ಕಾರಣ ಎಂದು ಕಿಡಿಕಾರಿದ್ದಾರೆ.
"ಪ್ರಧಾನಿ ನರೇಂದ್ರ ಮೋದಿ ಅವರ ಅಹಂಕಾರ ಮತ್ತು ಪಕ್ಷ ಗೆದ್ದೇ ಗೆಲುತ್ತದೆ ಎಂಬ ಅತಿಯಾದ ಆತ್ಮ ವಿಶ್ವಾಸ ಪಕ್ಷದ ಇಂದಿನ ಸೋಲಿಗೆ ಕಾರಣ. ಪ್ರಧಾನಿ ಮೋದಿ ಅವರ ಮುಂಗೋಪದಿಂದಾಗಿ ಪಕ್ಷಕ್ಕೆ ಹಾನಿಯಾಗುತ್ತಿದ್ದು, ಈ ಬಗ್ಗೆ ನಾನು ಸಾಕಷ್ಟು ಬಾರಿ ಹೇಳಿದ್ದೇನೆ. ಅಹಂಕಾರ, ಅತಿಯಾದ ಆತ್ಮವಿಶ್ವಾಸ ಮತ್ತು ಮುಂಗೋಪ ಎಂದಿಗೂ ಒಳ್ಳೆಯದಲ್ಲ. ಇದು ಪ್ರಧಾನಿ ಮೋದಿ ಅವರಿಗಷ್ಟೇ ಅಲ್ಲ, ಪಕ್ಷಕ್ಕೂ ತೀರಲಾರದ ಹಾನಿಯನ್ನುಂಟು ಮಾಡುತ್ತದೆ. ಈ ಮೂರು ಲಕ್ಷಣಗಳು ಪ್ರಜಾಪ್ರಭುತ್ವ ರಾಜಕೀಯದ ದೊಡ್ಡ ಹಂತಕ ಗುಣಗಳಾಗಿವೆ ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾದ್ಯಕ್ಷ ಅಮಿತ್ ಶಾ ಸೇರಿದಂತೆ ಬಿಜೆಪಿ ಹಿರಿಯ ಮುಖಂಡರ ವಿರುದ್ಧ ಕಿಡಿಕಾರಿರುವ ಸಿನ್ಹಾ, ಬಿಜೆಪಿ ಹಿರಿಯ ಮುಖಂಡರು ತಮ್ಮ ಸೀಟ್ ಬೆಲ್ಟ್ ಗಳನ್ನು ಭದ್ರಪಡಿಸಿಕೊಳ್ಳುವ ಮೂಲಕ 2019ರ ಲೋಕಸಭಾ ಚುನಾವಣೆಯನ್ನು ಎದುರಿಸಬೇಕು ಎಂದು ಹೇಳುವ ಮೂಲಕ ಸ್ವಕ್ಷೇತ್ರದಲ್ಲಿ ಯೋಗಿ ಆದಿತ್ಯಾನಾಥ್ ಅವರಿಗಾದ ಸೋಲು ನಾಳೆ ನಿಮ್ಮ ಕ್ಷೇತ್ರದಲ್ಲೂ ಆಗಬಹುದು ಎಂಬ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ. 
ಪಕ್ಷದಲ್ಲಿನ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳದೇ ಇದ್ದರೆ 2019ರ ಲೋಕಸಭಾ ಚುನಾವಣೆ ಕಠಿಣವಾಗಲಿದೆ ಎಂದು ಸಿನ್ಹಾ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT