ಹೃಷಿಕೇಶದಲ್ಲಿ ರಜನೀಕಾಂತ್ 
ದೇಶ

ಹೃಷಿಕೇಶದಲ್ಲಿ ಸೂಪರ್ ಸ್ಟಾರ್: ಸಾಧು ಸಂತರಿಗೆ ಭೋಜನ ವ್ಯವಸ್ಥೆ ಮಾಡಿದ ರಜನಿ

ತಮಿಳು ನಟ ಸೂಪರ್ ಸ್ಟಾರ್ ರಜನೀಕಾಂತ್ ಹೃಷಿಕೇಶದ ಸ್ವಾಮಿ ದಯಾನಂದ ಸ್ವಾಮಿ ಆಶ್ರಮಕ್ಕೆ ತೆರಳಿ ಸಂತರನ್ನು ಭೇಟಿಯಾಗಿದ್ದಾರೆ....

ನವದೆಹಲಿ: ತಮಿಳು ನಟ ಸೂಪರ್ ಸ್ಟಾರ್ ರಜನೀಕಾಂತ್ ಹೃಷಿಕೇಶದ ಸ್ವಾಮಿ ದಯಾನಂದ ಸ್ವಾಮಿ ಆಶ್ರಮಕ್ಕೆ ತೆರಳಿ ಸಂತರನ್ನು ಭೇಟಿಯಾಗಿದ್ದಾರೆ.
ಪ್ರತಿ ವರ್ಷ ಅಧಾತ್ಮ ಪ್ರವಾಸ ಕೈಗೊಳ್ಳುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಈ ವರ್ಷವೂ ಉತ್ತರ ಭಾರತದ ಕೆಲವೆಡೆ ಪ್ರವಾಸ ಆರಂಭಿಸಿದ್ದು,  ಮಂಗಳವಾರ ಉತ್ತರಾಖಂಡದ ಆಶ್ರಮಕ್ಕೆ ತೆರಳಿದ್ದರು. 
ಉತ್ತರಾಖಂಡದ ಸ್ವಾಮಿ ದಯಾನಂದ ಆಶ್ರಮದಲ್ಲಿ ಪ್ರಾರ್ಥನೆ ಸಲ್ಲಿಸಿದ ರಜನಿಕಾಂತ್, ಅವರಿಗಾಗಿ ಹೊರಗೆ ಕಾದು ನಿಂತಿದ್ದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. 
ತಾವು ಅಧ್ಯಾತ್ಮ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಈ ವರ್ಷದ ಆರಂಭದಲ್ಲಿ ರಜನೀಕಾಂತ್ ರಾಜಕೀಯ ಪ್ರವೇಶಿಸಲಿದ್ದು, ಹೊಸ ಪಕ್ಷ ಕಟ್ಟುವ ಘೋಷಣೆ ಮಾಡುವುದಾಗಿ ಹೇಳಿದ್ದರು, ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ತಮಿಳುನಾಡಿನ 234 ವಿಧಾನಾಸಭೆ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ತಿಳಿಸಿದ್ದರು, ಆದರೆ ಇದುವರೆಗೂ ರಜನೀಕಾಂತ್ ತಮ್ಮ ಪಕ್ಷದ ಹೆಸರನ್ನು ಘೋಷಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT