’ದಿ ವೈರ್’ ವಿರುದ್ಧ ಜೈ ಶಾ ಮಾಮ್ನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ತಡೆ, ಏ.12ರವರೆಗೆ ವಿಚಾರಣೆ ನಡೆಸದಿರಲು ಆದೇಶ 
ದೇಶ

’ದಿ ವೈರ್’ ವಿರುದ್ಧ ಜೈ ಶಾ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

’ದಿ ವೈರ್’ ಹಾಗೂ ಅದರ ಸುದ್ದಿಗಾರರ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಪುತ್ರ ಜೈ ಶಾ ಗುಜರಾತಿನ ವಿಚಾರಣಾ ನ್ಯಾಯಾಲಯದಲ್ಲಿ ಹೂಡಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಗೆ.........

ನವದೆಹಲಿ: ’ದಿ ವೈರ್’ ಹಾಗೂ ಅದರ ಸುದ್ದಿಗಾರರ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಪುತ್ರ ಜೈ ಶಾ ಗುಜರಾತಿನ ವಿಚಾರಣಾ ನ್ಯಾಯಾಲಯದಲ್ಲಿ ಹೂಡಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ.
ಗುಜರಾತ್ ನ್ಯಾಯಾಲಯವು ಏಪ್ರಿಲ್ 12 ರವರೆಗೆ ಮೊಕದ್ದಮೆ ಸಂಬಂಧ ವಿಚಾರಣೆ ನಡೆಸಬಾರದೆಂದು ಎಂದು ನ್ಯಾಯಾಲಯ ಆದೇಶಿಸಿದೆ.
ಇದೇ ವೇಳೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ಪೀಠವು ಪತ್ರಕರ್ತರ ವಿರುದ್ಧ ದೂರು ಸಲ್ಲಿಸಿದ್ದ ಜೈ ಶಾ ಹಾಗೂ ಇತರರಿಗೆ ಪತ್ರಕರ್ತರು ಸಲ್ಲಿಸಿದ್ದ ಮನವಿಗೆ ಎರಡು ವಾರದಲ್ಲಿ ಉತ್ತರಿಸುವಂತೆ ಹೇಳಿದೆ. 
ಗುಜರಾತ್ ವಿಚಾರನಾ ನ್ಯಾಯಾಲಯವು ತಾನು ಪತ್ರಕರ್ತರ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸಿ ಪತ್ರಕರ್ತರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. 
ಮಾದ್ಯಮವು ಹೆಚ್ಚು ಜವಾಬ್ದಾರಿಯುತವಾಗಿರಬೇಕು. ಅದು ಯಾರ ಬಗೆಗೆ ತಾನೇನು ಕಲ್ಪಿಸಿಕೊಳ್ಳುತ್ತೇನೋ ಅದನ್ನು ಬರೆಯುವಂತಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ತಾವು ಈ ಹಿಂದೆ ನಡೆದ ಘಟನೆಗಳ ಬಗೆಗೆ ಹೇಳುತ್ತಿಲ್ಲ ಎಂದು ಒತ್ತಿ ಹೇಳಿದ ಮುಖ್ಯ ನ್ಯಾಯಮೂರ್ತಿ ಮಿಶ್ರಾ ಕೆಲವೊಮ್ಮೆ ಪತ್ರಿಕೆಗಳು ’ನ್ಯಾಯಾಲಯದ ತಿರಸ್ಕಾರಕ್ಕೆ ಪಾತ್ರವಾಗುವಂತೆ’ ಬರೆಯುತ್ತಾರೆ ಎಂದು ಹೇಳಿದರು.
"ಮಾದ್ಯಮ, ಅಭಿವ್ಯಕ್ತಿ ಸ್ವಾತಂತ್ರದ ಕುರಿತಂತೆ ನಾನು ಈ ಹಿಂದೆ ಸಾಕಷ್ಟು ಸಲ ಹೇಳಿದ್ದೇನೆ. ನಾವು ಮಾದ್ಯಮವನ್ನು ಹತ್ತಿಕ್ಕಲು ಬಯಸುವುದಿಲ್ಲ. ಆದರೆ ಎಲ್ಲವಕ್ಕೂ ಕೆಲ ಮಿತಿಗಳಿವೆ. ಯಾರೊಬ್ಬರ ಬಗೆಗೆ ನಾವೇನು ಯೋಚಿಸುತ್ತೇವೆಯೋ ಅದನ್ನೇ ಬರೆಯುವುದಲ್ಲ. ಇಲ್ಲಿ ಕೆಲ ಪರಿಮಿತಿಗಳಿಗೆ ಒಳಪಟ್ಟು ಬರೆಯಬೇಕು." ಅವರು ಹೇಳಿದ್ದಾರೆ.
ಜೈ ಶಾ ಅವರ ಸಂಸ್ಥೆಯೊಂದರ ಬಗೆಗೆ ’ದಿ ವೈರ್’ ಪ್ರಕಟಿಸಿದ್ದ ಲೇಖನವೊಂದರ ವಿರುದ್ಧ ಶಾ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಮೊಕದ್ದಮೆಯನ್ನು ವಜಾಗೊಳಿಸುವಂತೆ ಕೋರಿ ವೈರ್ ನ ಪತ್ರಕರ್ತರು ಗುಜರಾತ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಜ.8ರಂದು ನ್ಯಾಯಾಲಯವು ಪತ್ರಕರ್ತರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ತಿರಸ್ಕರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT