ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಗುರುವಾರ ಮೂವರು ಉಗ್ರರನ್ನು ಬಂಧಿಸಿದ್ದು, ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಸ್ಫೋಟಕ ಸಾಮಾಗ್ರಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ದಾಳಿ ನಡೆಸುವ ಉದ್ದೇಶದಿಂದಲೇ ಬದ್ಗಾಮ್ ಜಿಲ್ಲೆಗೆ ಬಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಗುಪ್ತಚರ ಮಾಹಿತಿಯನ್ನು ಆಧರಿಸಿ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಂಧಿತ ಉಗ್ರರಿಂದ ಮೂರು ಪಿಸ್ತೂಲ್ ನಾಲ್ಕು ಮ್ಯಾಗ್ಜಿನ್ ಮತ್ತು 12 ಸುತ್ತಿನ ಮದ್ದು ಗುಂಡುಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ಅವರು ಬಳಸುತ್ತಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ ಉಗ್ರರನ್ನು ಫೈಜಾನ್ ಉಲ್ ಜಮಾನ್ ಭಟ್, ಸಜದ್ ಅಹ್ಮದ್ ದಾರ್ ಮತ್ತು ಮೀಸೆರ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos