ವೈಎಸ್ಆರ್'ಸಿಪಿ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ 
ದೇಶ

ಕೊನೆಗೂ ಟಿಡಿಪಿ ಎಚ್ಚರಗೊಂಡಿತು: ಆಂಧ್ರ ಸಿಎಂ ನಾಯ್ಡು ಕುರಿತು ಜಗನ್ ಮೋಹನ್ ರೆಡ್ಡಿ ವ್ಯಂಗ್ಯ

ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವುದರ ಕುರಿತಂತೆ ವೈಎಸ್ಆರ್'ಸಿಪಿ ಹಲವು ವರ್ಷಗಳಿಂದ ಸುದೀರ್ಘ ಹೋರಾಗ ನಡೆಸಿದ ಬಳಿಕ ದೇಶ ಹಾಗೂ ಟಿಡಿಪಿ ಇದೀಗ ಎಚ್ಚರಗೊಂಡಿದೆ ಎಂದು ವೈಎಸ್ಆರ್'ಸಿಪಿ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿಯವರು ಶುಕ್ರವಾರ ಹೇಳಿದ್ದಾರೆ...

ನವದೆಹಲಿ: ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವುದರ ಕುರಿತಂತೆ ವೈಎಸ್ಆರ್'ಸಿಪಿ ಹಲವು ವರ್ಷಗಳಿಂದ ಸುದೀರ್ಘ ಹೋರಾಗ ನಡೆಸಿದ ಬಳಿಕ ದೇಶ ಹಾಗೂ ಟಿಡಿಪಿ ಇದೀಗ ಎಚ್ಚರಗೊಂಡಿದೆ ಎಂದು ವೈಎಸ್ಆರ್'ಸಿಪಿ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿಯವರು ಶುಕ್ರವಾರ ಹೇಳಿದ್ದಾರೆ. 
ತೆಲುಗು ದೇಶಂ ಪಕ್ಷ (ಟಿಡಿಪಿ) ಕೇಂದ್ರದ ಆಡಳಿತಾರೂಢ ಎನ್'ಡಿಎ ಪಕ್ಷದೊಂದಿಗಿನ ಮೈತ್ರಿ ತೊರೆದಿರುವ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಜಗನ್ ಮೋಹನ್ ರೆಡ್ಡಿಯವರು, ರಾಜ್ಯದ ಜನತೆಯ ಸಹಾಯದೊಂದಿಗೆ ವಿಶೇಷ ಸ್ಥಾನಮಾನಕ್ಕಾಗಿ ವೈಎಸ್ಆರ್'ಸಿಪಿ ನಡೆಸುತ್ತಿದ್ದ ಹೋರಾಟದಿಂದ ಕೊನೆಗೂ ಸಿಎಂ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಸೇರಿದಂತೆ ದೇಶ ಎಚ್ಚರಗೊಂಡಿದೆ ಎಂದು ಹೇಳಿದ್ದಾರೆ. 
ರಾಜಕೀಯ ಮಾರ್ಗದರ್ಶನದ ಬಳಿಕವೂ, ಟಿಡಿಪಿ ಮತ್ತೆ ವೈಎಸ್ಆರ್'ಸಿಪಿಯ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಯ ನಿರ್ಣಯವನ್ನೇ ಅನುಸರಿಸಬೇಕಾಯಿತು. ಇದು ಪ್ರಜಾಪ್ರಭುತ್ವ ಹಾಗೂ ಆಂಧ್ರಪ್ರದೇಶದ ಗೆಲುವಾಗಿದೆ. ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಹೋರಾಟ ಹಾಗೂ ಆಂಧ್ರಪ್ರದೇಶ ಜನರ ಹಕ್ಕುಗಳ ಹೋರಾಟದಲ್ಲಿ ವೈಎಸ್ಆರ್'ಸಿಪಿ ಗೆಲವು ಸಾಧಿಸಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!