ಸಾಂದರ್ಭಿಕ ಚಿತ್ರ 
ದೇಶ

ಪ್ರೀತಿ ನಿವೇದನೆಗೆ ಯುವತಿ ನಕಾರ: ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಐಟಿಐ ವಿದ್ಯಾರ್ಥಿ

ತನ್ನ ಪ್ರೀತಿ ನಿವೇದನೆಗೆ ಯುವತಿ ನಕಾರ ವ್ಯಕ್ತಪಡಿಸಿದ್ದಕ್ಕೆ ನೊಂದ ಐಟಿಐ ವಿದ್ಯಾರ್ಥಿಯೊಬ್ಬ ಯುವತಿಗೆ ಲೈವ್ ವಿಡಿಯೋ ಕರೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್'ನ ಮುಲ್ಕಾಜ್ ಗಿರಿ ವಿನಾಯಕ ನಗರದಲ್ಲಿ ಬುಧವಾರ ನಡೆದಿದೆ...

ಹೈದರಾಬಾದ್: ತನ್ನ ಪ್ರೀತಿ ನಿವೇದನೆಗೆ ಯುವತಿ ನಕಾರ ವ್ಯಕ್ತಪಡಿಸಿದ್ದಕ್ಕೆ ನೊಂದ ಐಟಿಐ ವಿದ್ಯಾರ್ಥಿಯೊಬ್ಬ ಯುವತಿಗೆ ಲೈವ್ ವಿಡಿಯೋ ಕರೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್'ನ ಮುಲ್ಕಾಜ್ ಗಿರಿ ವಿನಾಯಕ ನಗರದಲ್ಲಿ ಬುಧವಾರ ನಡೆದಿದೆ. 
ಅಜ್ಮೀರ್ ಸಾಗರ್ (20) ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾನೆ. ಸನಾತ್ ನಗರದಲ್ಲಿರುವ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಸಾಗರ್ ವಿದ್ಯಾಭ್ಯಾಸ ಮಾಡುತ್ತಿದ್ದ. ನೆರೆದ್ಮೆಟ್ ಪೊಲೀಸ್ ಠಾಣಾ ನಿಯಂತ್ರಣದಲ್ಲಿರುವ ತನ್ನ ಹಿರಿಯ ಸಹೋದರಿ ಮನೆಯಲ್ಲಿ ಸಾಗರ್ ನೆಲೆಸಿದ್ದ. ಮನೆಯ ಹತ್ತಿದಲ್ಲೇ ಇದ್ದ 17 ವರ್ಷದ ಯುವತಿಯನ್ನು ಸಾಗರ್ ಇಷ್ಟಪಟ್ಟಿದ್ದ. ಇದರಂತೆ ಯುವತಿಗೆ ತನ್ನ ಪ್ರೀತಿ ನಿವೇದನೆಯನ್ನು ಹೇಳಿದ್ದಾನೆ. ಆದರೆ, ಯುವತಿ ಇದಕ್ಕೆ ನಿರಾಕರಿಸಿದ್ದಾಳೆ.
ಸಾಗರ್ ತನ್ನ ಮನೆಯವರಿಗೂ ಕೂಡ ತನ್ನ ಪ್ರೀತಿಯ ವಿಚಾರವನ್ನು ತಿಳಿಸಿದ್ದ. ಆದರೆ, ಇದಕ್ಕೆ ಮನೆಯವರು ನಿರಾಕರಿಸಿದ್ದರು. ಇದರಿಂದ ಸಾಕಷ್ಟು ನೊಂದಿದ್ದ ಸಾಗರ್, ಬುಧವಾರ ಬೆಳಿಗ್ಗೆ 10.41ರ ಸುಮಾರಿಗೆ ಮನೆಯಲ್ಲಿ ಒಬ್ಬನೇ ಇದ್ದ ಸಂದರ್ಭದಲ್ಲಿ ಯುವಕರಿದೆ ಸಂದೇಶವನ್ನು ಕಳುಸಿದ್ದಾರೆ. ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ. ವಿಡಿಯೋ ಕರೆ ಮಾಡುವುದಾಗಿ ತಿಳಿಸಿದ್ದಾನೆ. ಬಳಿಕ ಲೈವ್ ವಿಡಿಯೋ ಮಾಡಿ ನೇಣಿಗೆ ಶರಣಾಗಿದ್ದಾನೆ. 
ಸಾಗರ್ ಸಹೋದರಿ ಮನೆಯ ಮಾಲೀಕರಿಗೆ ಕರೆ ಮಾಡಿ ತನ್ನ ಸಹೋದರ ಫೋನ್ ತೆಗೆಯುತ್ತಿಲ್ಲ ಎಂದು ಹೇಳಿದ್ದಾರೆ. ಈ ವೇಳೆ ಮನೆಯ ಮಾಲೀಕ ಮನೆಯ ಬಾಗಿಲನ್ನು ಒಡೆದು ಹೊರ ಬಂದಾಗ ಸಾಗರ್ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT