ಕಾಂಗ್ರೆಸ್ ಸಂಸದ ರಿಪುನ್ ಬೊರಾ 
ದೇಶ

ರಾಷ್ಟ್ರಗೀತೆಯಲ್ಲಿ 'ಸಿಂಧು' ತೆಗೆದು 'ಈಶಾನ್ಯ' ಸೇರಿಸುವಂತೆ ರಾಜ್ಯಸಭೆಯಲ್ಲಿ ನಿರ್ಣಯ ಮಂಡನೆ

ರಾಷ್ಟ್ರಗೀತೆಯಲ್ಲಿ ಸಿಂಧು ಪದವನ್ನು ತೆಗೆದು ಈಶಾನ್ಯ ವಲಯದ ಪದ ಬಳಸುವಂತೆ ತಿದ್ದುಪಡಿ ತರಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸಂಸದ ರಿಪುನ್ ಬೊರಾ ರಾಜ್ಯಸಭೆಯಲ್ಲಿ ಖಾಸಗಿ ನಿರ್ಣಯ ಮಂಡಿಸಿದ್ದಾರೆ.

ನವದೆಹಲಿ: ರಾಷ್ಟ್ರಗೀತೆಯಲ್ಲಿ ಸಿಂಧು ಪದವನ್ನು ತೆಗೆದು ಈಶಾನ್ಯ ವಲಯದ ಪದ ಬಳಸುವಂತೆ ತಿದ್ದುಪಡಿ ತರಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸಂಸದ ರಿಪುನ್ ಬೊರಾ ರಾಜ್ಯಸಭೆಯಲ್ಲಿ ಖಾಸಗಿ ನಿರ್ಣಯ ಮಂಡಿಸಿದ್ದಾರೆ.

ಸಿಂಧು ಪದ ಸಿಂಧು ಪ್ರಾಂತ್ಯವನ್ನು ಪ್ರತಿನಿಧಿಸುತ್ತದೆ. ಆದರೆ, ಅದು ಬಹಳ ಕಾಲದಿಂದಲೂ ಭಾರತದ ಭಾಗವಾಗಿದ್ದರೂ ಪಾಕಿಸ್ತಾನದಲ್ಲಿದೆ. ಆದ್ದರಿಂದ ಅದನ್ನು ತೆಗೆದುಹಾಕಿ, ಈಶಾನ್ಯ ವಲಯ ಪ್ರತಿನಿಧಿಸುವ ಪದ ಸೇರಿಸಬೇಕು, ಇದಕ್ಕಾಗಿ ರಾಷ್ಟ್ರ ಗೀತೆಗೆ ತಿದ್ದುಪಡಿ ಮಾಡಿ ಪದ ಬದಲಾಯಿಸಬೇಕೆಂದು ಒತ್ತಾಯಿಸಿದ್ದಾರೆ.

ಈಶಾನ್ಯ ಭಾರತದ ಪ್ರಮುಖ ಭಾಗವಾಗಿದ್ದರೂ ರಾಷ್ಟ್ರಗೀತೆಯಲ್ಲಿ ಸೇರದಿರುವುದು ದುರದೃಷ್ಟಕರ ಸಂಗತಿಯಾಗಿದೆ. ಆದರೆ, ಪಾಕಿಸ್ತಾನದಲ್ಲಿರುವ ಸಿಂಧುವನ್ನು ಉಲ್ಲೇಖಿಸಿರುವುದು ದೇಶಕ್ಕೆ ಪ್ರತಿಕೂಲವಾಗಲಿದೆ ಎಂದು ಹೇಳಿದ್ದಾರೆ.

ರಾಷ್ಟ್ರಗೀತೆ ಜನಗಣ ಮನದಲ್ಲಿನ ತಿದ್ದುಪಡಿ ಮಾಡುವ ಸಂಬಂಧ ಭಾರತ ಸರ್ಕಾರ ಕ್ರಮ ಕೈಗೊಳ್ಳಬಹುದೆಂದು ಸ್ವಾತಂತ್ರ್ಯ ಭಾರತದ ಮೊದಲ ರಾಷ್ಟ್ರಪತಿ ಡಾ. ಬಾಬು ರಾಜೇಂದ್ರ ಪ್ರಸಾದ್ ಹೇಳಿಕೆ ನೀಡಿದ್ದಾರೆ ಎಂದು  ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT