ಎಂ. ಚಂದ್ರಬಾಬು ನಾಯ್ಡು 
ದೇಶ

ಆಂಧ್ರದ ಹಿತಸಕ್ತಿಗಾಗಿ ಎನ್ ಡಿಎದಿಂದ ಹೊರಬರಲಾಗಿದೆ: ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶಕ್ಕೆ ಶಾಶ್ವತ ಸ್ಥಾನಮಾನ ನೀಡದ ಹಿನ್ನೆಲೆಯಲ್ಲಿ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿರುವುದಾಗಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ಅಮರಾವತಿ: ಆಂಧ್ರ ಪ್ರದೇಶಕ್ಕೆ ಶಾಶ್ವತ ಸ್ಥಾನಮಾನ ನೀಡದ ಹಿನ್ನೆಲೆಯಲ್ಲಿ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿರುವುದಾಗಿ  ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ವಿಶೇಷ ಸ್ಥಾನಮಾನದ ಕಾಯ್ದೆ ಲೋಕಸಭೆಯಲ್ಲಿದ್ದು, ವಿಭಜನೆ ಸಂದರ್ಭದಲ್ಲಿ ನೀಡಲಾಗಿದ್ದ ಭರವಸೆ ಇನ್ನೂ ಈಡೇರಿಲ್ಲ. ಈ ಸಂದರ್ಭದಲ್ಲಿ ಎನ್ ಡಿಎ ಮೈತ್ರಿಯಿಂದ ಹೊರಬಾರದೆ ಅನ್ಯ ಮಾರ್ಗವಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಸ್ವಾರ್ಥ ಮನೋಭಾವದಿಂದ ಈ ನಿರ್ಧಾರ ಕೈಗೊಂಡಿಲ್ಲ. ಆಂಧ್ರಪ್ರದೇಶ ಹಿತಾಸಕ್ತಿಗಾಗಿ ಎನ್ ಡಿಎ ಮೈತ್ರಿಯಿಂದ ಹೊರಬರಲಾಗಿದೆ. ನಾಲ್ಕು ವರ್ಷಗಳ ಅವಧಿಯಲ್ಲಿ 29 ಬಾರಿ ದೆಹಲಿಗೆ ಭೇಟಿ ನೀಡಿದ್ದು, ಎಲ್ಲಾ ಪ್ರಯತ್ನ ಮಾಡಲಾಗಿದೆ. ಕೇಂದ್ರಸರ್ಕಾರ ಕೊನೆಯ ಬಜೆಟ್ ನಲ್ಲಿ ಆಂಧ್ರಪ್ರದೇಶದ ವಿಶೇಷ ಸ್ಥಾನಮಾನ ನೀಡದೆ ಇದುದ್ದರಿಂದ ಕ್ಯಾಬಿನೇಟ್ ನಿಂದ ತಮ್ಮ ಸಚಿವರನ್ನು ವಾಪಾಸ್ ಕರೆಯಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಅನುದಾನ ನೀಡುವಂತೆ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ. ಭಾವಾತ್ಮಕದಿಂದ ಅನುದಾನ ಹೆಚ್ಚಿಸುವುದಿಲ್ಲ ಎಂಬ ಹೇಳಿಕೆ ಬೇಜವಾಬ್ದಾರಿಯುತವಾದದ್ದು, ಭಾವನಾತ್ಮಕ ಅಂಶಗಳು ಅತ್ಯಂತ ಹೆಚ್ಚಿನ ಶಕ್ತಿ ಹೊಂದಿವೆ. ಕೇಂದ್ರ ಸರ್ಕಾರ ನ್ಯಾಯಯುತವಾಗಿ ನಡೆದುಕೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಯುಪಿಎ ಆಡಳಿತಾವಧಿಯಲ್ಲಿ 2014ರಲ್ಲಿ ತೆಲಂಗಾಣ ಪ್ರತ್ಯೇಕ ರಾಜ್ಯವಾದ ನಂತರ ಆಂಧ್ರಪ್ರದೇಶ ಆದಾಯ ಗಳಿಕೆಯಲ್ಲಿ ನಷ್ಟ ಅನುಭವಿಸುತ್ತಿದೆ.  ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿಶೇಷ ಅನುದಾನ ನೀಡುವುದಾಗಿ ಘೋಷಿಸಿತ್ತು, ಆದರೆ, ಇದೀಗ ಯಾವ ಅನುದಾನ ನೀಡದ ಹಿನ್ನೆಲೆಯಲ್ಲಿ ಟಿಡಿಪಿ ಎನ್ ಡಿಎ ಮೈತ್ರಿ ತೊರೆದಿದೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!