ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು 
ದೇಶ

ನಮ್ಮ ನಿರೀಕ್ಷೆಗಳನ್ನು ನೀವು ಈಡೇರಿಸಿಲ್ಲ: ಬಿಜೆಪಿ ಅಧ್ಯಕ್ಷರಿಗೆ ಪತ್ರ ಬರೆದ ಆಂಧ್ರ ಸಿಎಂ

ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಮೈತ್ರಿಕೂಟದಿಂದ ಸಂಬಂಧ ಮುರಿದುಕೊಂಡು ಹೊರಬಂದ ನಂತರ ಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ....

ಅಮರಾವತಿ: ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಮೈತ್ರಿಕೂಟದಿಂದ ಸಂಬಂಧ ಮುರಿದುಕೊಂಡು ಹೊರಬಂದ ನಂತರ ಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ತಮ್ಮ ನಿರೀಕ್ಷೆಗಳನ್ನು ಕೇಂದ್ರ ಈಡೇರಿಸಿಲ್ಲ ಎಂದು ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಅವರು ತಮ್ಮ ಪತ್ರದಲ್ಲಿ, ಆಂಧ್ರ ಪ್ರದೇಶ ವಿಭಜನೆ ಸಂದರ್ಭದಲ್ಲಿ ಸಂಯುಕ್ತ ಪ್ರಗತಿಪರ ಒಕ್ಕೂಟ(ಯುಪಿಎ)ಯಿಂದ ಆದ ಅನ್ಯಾಯದಿಂದ ಆಂಧ್ರ ಪ್ರದೇಶದ ಜನರಿಗೆ ನ್ಯಾಯ ದೊರಕಬಹುದೆಂಬ ನಿರೀಕ್ಷೆಯಿಂದ ಟಿಡಿಪಿ ಎನ್ ಡಿಎ ಮೈತ್ರಿಕೂಟವನ್ನು ಸೇರಿತ್ತು. ಆದರೆ ಮೈತ್ರಿಯಲ್ಲಿ ಮುಂದುವರಿಯುವುದರಲ್ಲಿ ಯಾವುದೇ ಅರ್ಥ ಮತ್ತು ಉದ್ದೇಶ ಈಡೇರುವುದಿಲ್ಲ ಎಂದು ಗೊತ್ತಾದ ಮೇಲೆ ಹೊರಬರಲು ನಿರ್ಧರಿಸಿತು ಎಂದು ಹೇಳಿದ್ದಾರೆ.
ಆಂಧ್ರ ಪ್ರದೇಶ ಜನತೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ, ಆಂಧ್ರಪ್ರದೇಶ ಪುನರ್ರಚನೆ ಕಾಯ್ದೆ 2014ನ್ನು ಜಾರಿಗೆ ತರುವ ಇಚ್ಛೆಯನ್ನು ಹೊಂದಿಲ್ಲ. ರಾಜ್ಯಸಭೆಯಲ್ಲಿ ಪಕ್ಷ ನೀಡಿರುವ ವಿಶೇಷ ಸ್ಥಾನಮಾನದ ಭರವಸೆಯನ್ನು ಕೂಡ ಈಡೇರಿಸಿಲ್ಲ. ಪುನರ್ರಚನೆ ಕಾಯ್ದೆಯಲ್ಲಿ ನಮೂದಿಸಿರುವ ಸಂವಿಧಾನಿಕ ಜವಾಬ್ದಾರಿಗಳನ್ನು ಜಾರಿಗೆ ತರುವಲ್ಲಿ ಕೂಡ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಮುಖ್ಯಮಂತ್ರಿ ನಾಯ್ಡು ಪತ್ರದಲ್ಲಿ ವಿವರಿಸಿದ್ದಾರೆ.

ಬಿಜೆಪಿ ಮತ್ತು ಟಿಡಿಪಿಗಳು ಒಟ್ಟಾಗಿ 2014ರ ಸಂಸತ್ತು ಚುನಾವಣೆಯನ್ನು ಎದುರಿಸಿದವು. ಆಂಧ್ರ ಪ್ರದೇಶ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕೂಡ ಒಟ್ಟಾಗಿ ಸ್ಪರ್ಧಿಸಿದ್ದವು. ಆದರೆ ಚುನಾವಣೆ ಮುಗಿದ ನಂತರ ತೆಲಂಗಾಣದಲ್ಲಿ ಮೈತ್ರಿ ಮಾಡಿಕೊಂಡ ಬಿಜೆಪಿ ಸೌಜನ್ಯಕ್ಕೆ ಕೂಡ ನಮಗೆ ತಿಳಿಸಿಲ್ಲ ಎಂದು ಆರೋಪಿಸಿದ್ದಾರೆ.

ಅನ್ಯಾಯವಾಗಿ ಆಂಧ್ರ ಪ್ರದೇಶ ಮತ್ತು ತೆಲಂಗಾಣ ವಿಭಜನೆಯಾದ್ದರಿಂದ ಭಾರೀ ಪ್ರಮಾಣದ ಆದಾಯ ನಷ್ಟವಾಗಿದ್ದಲ್ಲದೆ ಹಣಕಾಸು ಅಸ್ಥಿರತೆ, ರಾಜಧಾನಿ ನಗರವಿಲ್ಲದಿರುವುದು. ಭಾರೀ ಹೊಣೆಗಾರಿಕೆಗಳು, ಕಡಿಮೆ ಆಸ್ತಿಗಳು, ವಿದ್ಯುತ್ ಶಕ್ತಿ ಕೊರತೆ, ಸಂಸ್ಥೆಗಳ ಕೊರತೆ ಮತ್ತು ಕಳಪೆ ಮೂಲಸೌಕರ್ಯಗಳನ್ನು ಕೂಡ ಎದುರಿಸಬೇಕಾಗುತ್ತಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ಏಕೆ ನಿರಾಕರಿಸಲಾಗಿದೆ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿರುವ ಚಂದ್ರಬಾಬು ನಾಯ್ಡು , ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿ ಎಂದು 29 ಬಾರಿ ದೆಹಲಿಗೆ ಹೋಗಿದ್ದೆ, ಆದರೆ ಪ್ರತಿಸಾರಿ ಹೋಗಿ ಬಂದಾಗಲೂ ಭರವಸೆ ಮತ್ತು ಆಶ್ವಾಸನೆಗಳಿಂದ ಹಿಂತಿರುಗಿದ್ದೇನೆ ಎಂದು ಹೇಳಿದ್ದಾರೆ.

ಈ ಬಾರಿಯ ಬಜೆಟ್ ನಲ್ಲಿಯಾದರೂ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಘೋಷಿಸಬಹುದೆಂದು ನಿರೀಕ್ಷೆಗಳನ್ನಿಟ್ಟುಕೊಂಡಿದ್ದೆ. ಆದರೆ ಬಜೆಟ್ ನಲ್ಲಿ ನಮ್ಮ ರಾಜ್ಯಕ್ಕೆ ಸಾಕಷ್ಟು ಹಣ ಮತ್ತು ಯೋಜನೆಗಳನ್ನು ಘೋಷಿಸಿಲ್ಲ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಷಾದ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT