ನರೇಂದ್ರ ಮೋದಿ 
ದೇಶ

ಕೊಯ್ದ ಪೈರಿನ ಕೂಳೆ ದಹಿಸುವುದು ತಪ್ಪು: ರೈತರಿಗೆ ಪ್ರಧಾನಿ ನರೇಂದ್ರ ಮೋದಿ

ಉತ್ತರ ಭಾರತದಲ್ಲಿ ಸಾಮಾನ್ಯವಾಗಿರುವ ಕೊಯ್ದ ಪೈರಿನ ಕೂಳೆಗಳನ್ನು ಸುಟ್ಟು ಹಾಕುವ ಪದ್ಧತಿ ಇದ್ದು, ಈ ರೀತಿ ಮಾಡುವುದು ತಪ್ಪು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಉತ್ತರ ಭಾರತದಲ್ಲಿ ಸಾಮಾನ್ಯವಾಗಿರುವ ಕೊಯ್ದ ಪೈರಿನ ಕೂಳೆಗಳನ್ನು ಸುಟ್ಟು ಹಾಕುವ ಪದ್ಧತಿ ಇದ್ದು, ಈ ರೀತಿ ಮಾಡುವುದು ತಪ್ಪು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 
ರೈತರು ಕೊಯ್ದ ಪೈರಿನ ಕೂಳೆಗಳನ್ನು ದಹಿಸದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಸಹ ಹಲವು ಕ್ರಮಗಳನ್ನು ಕೈಗೊಂಡಿದೆ. ಕೆಲವು ಪ್ರದೇಶಗಳಲ್ಲಿ ಕೊಯ್ದ ಪೈರಿನ ಕೂಳೆಗಳನ್ನು ದಹಿಸುವ ಪದ್ಧತಿ ಇದೆ. ನಾವು ಬೆಳೆ ಬೆಳೆದಾಗ ಮಣ್ಣು, ಗಾಳಿ, ಬೆಳಕುಗಳಿಂದ ಪೌಷ್ಟಿಕಾಂಶ ದೊರೆಯುತ್ತದೆ. ಆದರೆ ಕೊಯ್ದ ಪೈರಿನ ಕೂಳೆಯನ್ನು ದಹನ ಮಾಡುವುದರಿಂದ ಎಲ್ಲಾ ಪೌಷ್ಠಿಕಾಂಶಗಳನ್ನೂ ನಾಶ ಮಾಡುತ್ತಿದ್ದೆವೆ, ಅಷ್ಟೇ ಅಲ್ಲದೇ ಇದರಿಂದ ವಾಯುಮಾಲಿನ್ಯವೂ ಹೆಚ್ಚಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 
ಕೃಷಿ ಉನ್ನತಿ ಮೇಳದ ಮೂಲಕ ರೈತರಿಗೆ ಕೊಯ್ದ ಪೈರಿನ ಕೂಳೆಗಳನ್ನು ದಹಿಸದಂತೆ ಮನವಿ ಮಾಡುತ್ತೇನೆ, ಮುಂದಿನ ಬೆಳೆಗೆ ಸಹಕಾರಿಯಾಗುವಂತೆ ಕೂಳೆಗಳನ್ನು ತೆಗೆಯುವುದಕ್ಕೆ ಅಗತ್ಯವಿರುವ ಉಪಕರಣಗಳ ಖರೀದಿಗೆ ಸರ್ಕಾರ ಹಣಕಾಸಿನ ನೆರವು ನೀಡುತ್ತದೆ ಎಂದು ರೈತರಿಗೆ ಮೋದಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT