ಮಲ್ಲಿಕಾರ್ಜುನ ಖರ್ಗೆ 
ದೇಶ

ಸಂಸ್ಥಾಪಕರ ಕಲ್ಪನೆಯಂತೆ ಭಾರತ ನಿರ್ಮಾಣಕ್ಕೆ ಕಾಂಗ್ರೆಸ್ ರಾಜಕೀಯ ನಿರ್ಣಯ: ಖರ್ಗೆ

ಸಮಾನ ಮನಸ್ಕ ಪಕ್ಷಗಳೊಂದಿಗೆ ಸಹಕಾರಕ್ಕಾಗಿ ಪ್ರಾಯೋಗಿಕ ವಿಧಾನ ಅಳವಡಿಸಿಕೊಳ್ಳಲು ಸಂಸ್ಥಾಪಕರ ಕಲ್ಪನೆಯಂತೆ ರಾಜಕೀಯ ನಿರ್ಣಯವನ್ನು ಕಾಂಗ್ರೆಸ್ ಅಂಗೀಕರಿಸಿದೆ.

ನವದೆಹಲಿ: 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಸಾಮಾನ್ಯ ಕಾರ್ಯಕ್ರಮ  ವಿಸ್ತರಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಸಹಕಾರಕ್ಕಾಗಿ ಪ್ರಾಯೋಗಿಕ ವಿಧಾನ ಅಳವಡಿಸಿಕೊಳ್ಳಲು ಸಂಸ್ಥಾಪಕರ ಕಲ್ಪನೆಯಂತೆ ರಾಜಕೀಯ ನಿರ್ಣಯವನ್ನು ಕಾಂಗ್ರೆಸ್  ಅಂಗೀಕರಿಸಿದೆ.

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಪ್ರಮುಖ ಪ್ರತಿಪಕ್ಷಗಳೊಂದಿಗೆ ಕಾಂಗ್ರೆಸ್  ಚುನಾವಣಾ ಪೂರ್ವ ಮೈತ್ರಿಗಾಗಿ ಪ್ರಯತ್ನಿಸುವ ರಾಜಕೀಯ ನಿರ್ಣಯವನ್ನು  ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿಂದು ನಡೆದ ಎಐಸಿಸಿಯ 84 ನೇ ಮಹಾ ಅಧಿವೇಶನದಲ್ಲಿ ಮಂಡಿಸಿದರು.

ಸಂವಿಧಾನಿಕ ಮೌಲ್ಯಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಸರ್ಕಾರಿ ಸಂಸ್ಥೆಗಳು ಒತ್ತಡಕ್ಕೊಳಗಾಗಿ ತಮ್ಮ ಸ್ವಾತಂತ್ರ್ಯದೊಂದಿಗೆ ರಾಜೀ ಮಾಡಿಕೊಂಡಿವೆ ಎಂದು ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ದಾಳಿ ನಡೆಸಿದರು.

ದೇಶದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದ್ದು,  ಸಂವಿಧಾನದ ರಕ್ಷಣೆಗಾಗಿ ಯಾವ ತ್ಯಾಗಕ್ಕೂ ಸಿದ್ದರಿರಬೇಕಾದ ಅನೀವಾರ್ಯತೆ ಎದುರಾಗಿದೆ. ಗಣತಂತ್ರದ ಸಂಸ್ಥಾಪಕರ ಮೌಲ್ಯ ಆದರ್ಶಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದರು

ವೈವಿಧ್ಯಮಯ ಕಲೆ, ಧರ್ಮ, ಸಾಹಿತ್ಯ, ಸಂಸ್ಕೃತಿಯ ಜನರು ದೇಶದಲ್ಲಿ ವಾಸಿಸುತ್ತಿದ್ದು,   ಕೋಮುವಾದಿಗಳು, ಪ್ರತ್ಯೇಕತವಾದಿಗಳಿಂದ ಅಪಾಯ ಎದುರಾದಂತಹ ಸಂದರ್ಭದಲ್ಲಿ ಜನತೆಯ ರಕ್ಷಣೆ ಮಾಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ  ಎಂದರು

 ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರು, ಕಾರ್ಮಿಕರು,  ಅಸಂಘಟಿತ ವಲಯದ ಕೆಲಸಗಾರರು, ಸ್ವ ಉದ್ಯೋಗಿಗಳು, ದಲಿತರು, ವ್ಯಾಪಾರಿಗಳು, ಅಲ್ಪಸಂಖ್ಯಾತರು, ಬಡವರು ದ್ರೋಹಕ್ಕೊಳಗಾಗಿದ್ದಾರೆ.ಇವಿಎಂಗಳನ್ನು ತಿರುಚಲಾಗಿದೆ  ಎಂದು ನಿರ್ಣಯದಲ್ಲಿ ಆರೋಪಿಸಲಾಗಿದೆ.

ನಾಗರಿಕರ ಮೂಲಭೂತ ಹಕ್ಕು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗಿದ್ದು, ಪ್ರಜಾಪ್ರಭುತ್ವ ವಿರೋಧಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಬಿಜೆಪಿಗೆ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT