ರೋಹಿಂಗ್ಯ 
ದೇಶ

ರೋಹಿಂಗ್ಯ ನ್ನರು ಭದ್ರತೆಗೆ ಅಪಾಯ, ಗಡಿಪಾರು ಮಾಡಿ: ಆರ್ ಎಸ್ಎಸ್

ರಾಷ್ಟ್ರೀಯ ಸ್ವಯಂ ಸೇವಕ ಸಂಘ ರೋಹಿಂಗ್ಯ ನಿರಾಶ್ರಿತರನ್ನು ದೇಶದ ಭದ್ರತೆಗೆ ಅಪಾಯಕಾರಿ ಎಂದಿದ್ದು, ಗಡಿಪಾರು ಮಾಡಬೇಕೆಂದು ಆಗ್ರಹಿಸಿದೆ.

ಜಮ್ಮು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ರೋಹಿಂಗ್ಯ ನಿರಾಶ್ರಿತರನ್ನು ದೇಶದ ಭದ್ರತೆಗೆ ಅಪಾಯಕಾರಿ ಎಂದಿದ್ದು, ಗಡಿಪಾರು ಮಾಡಬೇಕೆಂದು ಆಗ್ರಹಿಸಿದೆ. 
ಮಯನ್ಮಾರ್, ಬಾಂಗ್ಲಾದೇಶಗಳಿಂದ ಬಂದು ಜಮ್ಮು-ಕಾಶ್ಮೀರದಲ್ಲಿರುವ ರೋಹಿಂಗ್ಯ ಮುಸ್ಲಿಮರು ದೇಶದ ಭದ್ರತೆಗೆ ಅಪಾಯಕಾರಿಯಾಗಿದ್ದಾರೆ. ನಾವು ರೋಹಿಂಗ್ಯನ್ನರನ್ನು ನಿರಾಶ್ರಿತರು ಎಂದು ಪರಿಗಣಿಸುವುದಿಲ್ಲ. ರೋಹಿಂಗ್ಯ ಮುಸ್ಲಿಮರು ವಿದೇಶದಿಂದ ಅಕ್ರಮವಾಗಿ ವಲಸೆ ಬಂದಿರುವವೌರ್ ಎಂದು ಆರ್ ಎಸ್ ಎಸ್ ನ ಪ್ರಾಂತ್ ಸಂಘಚಾಲಕ, ನಿವೃತ್ತ ಬ್ರಿಗೇಡಿಯರ್ ಸುಚಿತ್ ಸಿಂಗ್ ಹೇಳಿದ್ದಾರೆ. 
ಜಮ್ಮು-ಕಾಶ್ಮೀರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿರುವ ಅವರು, ದೇಶದ ಭದ್ರತೆಗೇ ಅಪಾಯಕಾರಿಯಾಗಿರುವ ಅವರನ್ನು ನಾವೇಕೆ ಸಹಿಸಿಕೊಳ್ಳಬೇಕು? ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅಕ್ರಮವಾಗಿ ಬಂದಿರುವ ರೋಹಿಂಗ್ಯ ಮುಸ್ಲಿಮರನ್ನು ಗುರುತಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ. 
ರಾಜ್ಯದಲ್ಲಿ ರೋಹಿಂಗ್ಯ ಅಕ್ರಮ ವಲಸಿಗರು ಪ್ರವೇಶಿಸುವುದಕ್ಕೆ ಅವಕಾಶ ನೀಡಿದ ಕಾಂಗ್ರೆಸ್ ನೇತೃತ್ವದ ಈ ಹಿಂದಿನ ಯುಪಿಎ ಸರ್ಕಾರದ ವಿರುದ್ಧವೂ ಆರ್ ಎಸ್ ಎಸ್ ನಾಯಕರು ವಾಗ್ದಾಳಿ ನಡೆಸಿದ್ದು, ಈಗಿನ ಸ್ಥಿತಿಗೆ ಈ ಹಿಂದಿನ ಯುಪಿಎ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT