ಪಿ.ಚಿದಂಬರಂ 
ದೇಶ

ಬಿಜೆಪಿ ಸರ್ಕಾರ ಜನರನ್ನು ಬಡತನದತ್ತ ತಳ್ಳುತ್ತಿದೆ: ಪಿ.ಚಿದಂಬರಂ

ಕಾಂಗ್ರೆಸ್ ಸಮಗ್ರ ಅಧಿವೇಶನದ ಕೊನೆಯ ದಿನವಾದ ಇಂದು ಮಾತನಾಡಿದ ಮಾಜಿ ಕೇಂದ್ರ ಸಚಿವ ...

ನವದೆಹಲಿ: ಕಾಂಗ್ರೆಸ್ ಸಮಗ್ರ ಅಧಿವೇಶನದ ಕೊನೆಯ ದಿನವಾದ ಇಂದು ಮಾತನಾಡಿದ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪಿ. ಚಿದಂಬರಂ, ಮೋದಿ ಸರ್ಕಾರ ಗಟ್ಟಿಯಾದ ಆರ್ಥಿಕತೆಯನ್ನು ಅಧಿಕಾರ ವಹಿಸಿಕೊಂಡ ದಿನಗಳಲ್ಲಿ ಪಡೆದುಕೊಂಡಿತ್ತು. ಅದು ಹಿಂದಿನ ಯುಪಿಎ ಸರ್ಕಾರದ ಕೊಡುಗೆ. ಆದರೆ ಇಂದು ಭಾರತದ ಆರ್ಥಿಕತೆ ವಿಶ್ವದ ಆರ್ಥಿಕ ಪರಿಸ್ಥಿತಿಗೆ ಹೋಲಿಸಿದರೆ ಇಳಿಮುಖವಾಗುತ್ತಿದೆ. ಇದಕ್ಕೆ ಮೋದಿ ಸರ್ಕಾರದ ಕಳಪೆ ನೀತಿಯೇ ಕಾರಣ ಎಂದು ಟೀಕಿಸಿದರು.

14 ಕೋಟಿ ಜನರನ್ನು ಬಡತನದಿಂದ ಹೊರತಂದದ್ದು ಹಿಂದಿನ ಮನಮೋಹನ್ ಸಿಂಗ್ ಸರ್ಕಾರದ ಅತಿ ದೊಡ್ಡ ಸಾಧನೆ. ಆದರೆ ಇಂದು ಬಿಜೆಪಿ ಸರ್ಕಾರ ದೇಶದ ಜನರನ್ನು ಬಡತನದತ್ತ ತಳ್ಳುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ ಜನರ ಸಂಖ್ಯೆ ಇತ್ತೀಚೆಗೆ ಅಧಿಕವಾಗುತ್ತಿದೆ ಎಂದು ಹೇಳಿದರು.

1990ರ ದಶಕದಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಮುಕ್ತ ನೀತಿಗೆ ನಾಂದಿ ಹಾಡಿದ್ದರು. ಅದು ಮನಮೋಹನ್ ಸಿಂಗ್ ಸರ್ಕಾರದಲ್ಲಿ ಉಚ್ಱಾಯ ಸ್ಥಿತಿಗೆ ತಲುಪಿತ್ತು. ಇಂದು ಅಧೋಗತಿಗೆ ಇಳಿಯುತ್ತಿದೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT