ಅರವಿಂದ್ ಕೇಜ್ರಿವಾಲ್ 
ದೇಶ

ಗಡ್ಕರಿ, ಕಪಿಲ್ ಸಿಬಲ್ ಕ್ಷಮೆ ಕೋರಿದ ದೆಹಲಿ ಸಿಎಂ ಕೇಜ್ರಿವಾಲ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಪಿಲ್ ಸಿಬಲ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿಯ ಕ್ಷಮೆ ಕೇಳಿದ್ದಾರೆ.

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಪಿಲ್ ಸಿಬಲ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿಯ ಕ್ಷಮೆ ಕೇಳಿದ್ದಾರೆ. 
ಆಧಾರ ರಹಿತ ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ನಿತಿನ್ ಗಡ್ಕರಿ ಅವರಲ್ಲಿ ಅರವಿಂದ್ ಕೇಜ್ರಿವಾಲ್ ಕ್ಷಮೆ ಕೇಳಿದ್ದು,  ಪಂಜಾಬ್ ಸಚಿವ ಬಿಕ್ರಮ್ ಸಿಂಗ್ ಮಜಿಥಿಯಾ ಬಳಿ ಕ್ಷಮೆ ಯಾಚಿಸಿದ ಬೆನ್ನಲ್ಲೇ ಕೇಜ್ರಿವಾಲ್ ಕಪಿಲ್ ಸಿಬಲ್ ಹಾಗೂ ನಿತಿನ್ ಗಡ್ಕರಿ ಅವರಲ್ಲಿ ಕ್ಷಮೆ ಕೋರಿದ್ದಾರೆ. 
ವೊಡೋಫೋನ್ ಸಂಸ್ಥೆಗೆ ಸಂಬಂಧಿಸಿದಂತೆ ಕಪಿಲ್ ಸಿಬಲ್ ವಯಕ್ತಿಕ ಹಿತಾಸಕ್ತಿಗಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕಪಿಲ್ ಸಿಬಲ್ ಪುತ್ರ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈಗ ಕಪಿಲ್ ಸಿಬಲ್ ಬಳಿಒಯೂ ಕೇಜ್ರಿವಾಲ್ ಕ್ಷಮೆ ಕೇಳಿದ್ದಾರೆ. 
2014 ರಲ್ಲಿ ನಿತಿನ್ ಗಡ್ಕರಿ ಅವರನ್ನು ದೇಶದ ಅತ್ಯಂತ ಭ್ರಷ್ಟ ರಾಜಕಾರಣಿ ಎಂದಿದ್ದಕ್ಕೆ ಗಡ್ಕರಿ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈಗ ನಿತಿನ್ ಗಡ್ಕರಿ ಕೇಜ್ರಿವಾಲ್ ಕ್ಷಮೆಯನ್ನು ಒಪ್ಪಿಕೊಂಡಿದ್ದಾರೆ.

"ನನ್ನ ಹಾಗೂ ನನ್ನ ಮಗನ ವಿರುದ್ಧ ಮಾಡಿದ್ದ ಆರೋಪಗಳು ಆಧಾರ ರಹಿತ ಎಂಬುದನ್ನು ಕೇಜ್ರಿವಾಲ್ ಹಾಗೂ ಸಿಸೋಡಿಯಾ ಒಪ್ಪಿಕೊಂಡಿದ್ದಾರೆ. ಎಲ್ಲವನ್ನೂ ಮರೆತು ಮುನ್ನಡೆಯೋಣ" ಎಂದು ಕಪಿಲ್ ಸಿಬಲ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ