ಮಾಯಾಂಕ್ ಗಾಂಧಿ 
ದೇಶ

ಕೇಜ್ರಿವಾಲ್ ಅಂಜಲಿ ದಾಮಾನಿಯಾ ಕ್ಷಮೆ ಕೋರಬೇಕು: ಮಾಯಾಂಕ್ ಗಾಂಧಿ ಒತ್ತಾಯ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷದ ಮಾಜಿ ಸಂಚಾಲಕಿ ಅಂಜಲಿ ದಾಮಾನಿಯಾ ಅವರ ಕ್ಷಮೆ ಕೋರಬೇಕೆಂದು ಆಮ್ ಆದ್ಮಿ ಪಕ್ಷದ ಮಾಜಿ ಸದಸ್ಯ ಮಾಯಾಂಕ್ ಗಾಂಧಿ ಒತ್ತಾಯಿಸಿದ್ದಾರೆ.

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕ್ಷಮೆ ಕೋರಿದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷದ ಮಾಜಿ ಸಂಚಾಲಕಿ ಅಂಜಲಿ ದಾಮಾನಿಯಾ ಅವರ ಕ್ಷಮೆ ಕೋರಬೇಕೆಂದು ಆಮ್ ಆದ್ಮಿ ಪಕ್ಷದ ಮಾಜಿ ಸದಸ್ಯ ಮಾಯಾಂಕ್ ಗಾಂಧಿ ಒತ್ತಾಯಿಸಿದ್ದಾರೆ.

ನಿತಿನ್ ಗಡ್ಕರಿ ವಿರುದ್ಧ ಆರೋಪ ಮಾಡಲು ಅಂಜಲಿ ದಾಮಾನಿಯಾ ಅವರ ಮಾಹಿತಿ ಬಳಸಿಕೊಂಡಿದ್ದ ಅರವಿಂದ್ ಕೇಜ್ರಿವಾಲ್ ಕೂಡಲೇ ಕ್ಷಮೆ ಕೋರಬೇಕು.  ಅಂಜಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವ ವಿಶ್ವಾಸವಿರುವುದಾಗಿ ಮಾಯಾಂಕ್ ಗಾಂಧಿ ಹೇಳಿದ್ದಾರೆ.

ಮಾಹಿತಿ ಹಕ್ಕು ಕಾರ್ಯಕರ್ತೆಯಾಗಿದ್ದ ಅಂಜಲಿ ದಾಮಾನಿಯಾ, ನಿತಿನ್ ಗಡ್ಕರಿ ಎನ್ ಸಿಪಿಯೊಂದಿಗೆ ಮೃಧು ಧೋರಣೆ ಹೊಂದಿದ್ದಾರೆ. ಅಂದಿನ ಮಹಾರಾಷ್ಟ್ರ ಮುಖ್ಯಮಂತ್ರಿ ಶರದ್ ಪವರ್ ಅವರೊಂದಿಗೆ ವ್ಯವಹಾರಿಕ ಸಂಬಂಧ ಹೊಂದಿದ್ದಾರೆ  ಎಂದು ಆರೋಪಿಸಿದ್ದರು.

ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಿಗೆ ಸಂಬಂಧಿಸಿದಂತೆ ಗಡ್ಕರಿ ಅವರನ್ನು ಭೇಟಿಯಾಗಲು ದಾಮಾನಿಯಾ ಪ್ರಯತ್ನಿಸಿದ್ದರೂ ನಿತಿನ್ ಗಡ್ಕರಿ ಅವಕಾಶ ಮಾಡಿಕೊಟ್ಟಿರಲಿಲ್ಲ. ಹಗರಣ ಬಯಲಿಗೆಳೆಯದಂತೆ ಗಡ್ಕರಿ ಒತ್ತಡ ಹೇರುತ್ತಿದ್ದರು ಎಂದು ಆಕೆ ಆರೋಪಿಸಿದ್ದರು.

ದಾಮಾನಿಯಾ ಅವರನ್ನು ಭೇಟಿಯಾಗಿಲ್ಲ ಎಂದು ಗಡ್ಕರಿ ಹೇಳುತ್ತಿದ್ದರು. ಗಡ್ಕರಿ ಹಾಗೂ ಪವಾರ್ ನಡುವಿನ ಸಂಬಂಧದ ಬಗ್ಗೆಗೂ ಬಿಜೆಪಿ ತಿರಸ್ಕರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT