ಮಾಯಾಂಕ್ ಗಾಂಧಿ 
ದೇಶ

ಕೇಜ್ರಿವಾಲ್ ಅಂಜಲಿ ದಾಮಾನಿಯಾ ಕ್ಷಮೆ ಕೋರಬೇಕು: ಮಾಯಾಂಕ್ ಗಾಂಧಿ ಒತ್ತಾಯ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷದ ಮಾಜಿ ಸಂಚಾಲಕಿ ಅಂಜಲಿ ದಾಮಾನಿಯಾ ಅವರ ಕ್ಷಮೆ ಕೋರಬೇಕೆಂದು ಆಮ್ ಆದ್ಮಿ ಪಕ್ಷದ ಮಾಜಿ ಸದಸ್ಯ ಮಾಯಾಂಕ್ ಗಾಂಧಿ ಒತ್ತಾಯಿಸಿದ್ದಾರೆ.

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕ್ಷಮೆ ಕೋರಿದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷದ ಮಾಜಿ ಸಂಚಾಲಕಿ ಅಂಜಲಿ ದಾಮಾನಿಯಾ ಅವರ ಕ್ಷಮೆ ಕೋರಬೇಕೆಂದು ಆಮ್ ಆದ್ಮಿ ಪಕ್ಷದ ಮಾಜಿ ಸದಸ್ಯ ಮಾಯಾಂಕ್ ಗಾಂಧಿ ಒತ್ತಾಯಿಸಿದ್ದಾರೆ.

ನಿತಿನ್ ಗಡ್ಕರಿ ವಿರುದ್ಧ ಆರೋಪ ಮಾಡಲು ಅಂಜಲಿ ದಾಮಾನಿಯಾ ಅವರ ಮಾಹಿತಿ ಬಳಸಿಕೊಂಡಿದ್ದ ಅರವಿಂದ್ ಕೇಜ್ರಿವಾಲ್ ಕೂಡಲೇ ಕ್ಷಮೆ ಕೋರಬೇಕು.  ಅಂಜಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವ ವಿಶ್ವಾಸವಿರುವುದಾಗಿ ಮಾಯಾಂಕ್ ಗಾಂಧಿ ಹೇಳಿದ್ದಾರೆ.

ಮಾಹಿತಿ ಹಕ್ಕು ಕಾರ್ಯಕರ್ತೆಯಾಗಿದ್ದ ಅಂಜಲಿ ದಾಮಾನಿಯಾ, ನಿತಿನ್ ಗಡ್ಕರಿ ಎನ್ ಸಿಪಿಯೊಂದಿಗೆ ಮೃಧು ಧೋರಣೆ ಹೊಂದಿದ್ದಾರೆ. ಅಂದಿನ ಮಹಾರಾಷ್ಟ್ರ ಮುಖ್ಯಮಂತ್ರಿ ಶರದ್ ಪವರ್ ಅವರೊಂದಿಗೆ ವ್ಯವಹಾರಿಕ ಸಂಬಂಧ ಹೊಂದಿದ್ದಾರೆ  ಎಂದು ಆರೋಪಿಸಿದ್ದರು.

ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಿಗೆ ಸಂಬಂಧಿಸಿದಂತೆ ಗಡ್ಕರಿ ಅವರನ್ನು ಭೇಟಿಯಾಗಲು ದಾಮಾನಿಯಾ ಪ್ರಯತ್ನಿಸಿದ್ದರೂ ನಿತಿನ್ ಗಡ್ಕರಿ ಅವಕಾಶ ಮಾಡಿಕೊಟ್ಟಿರಲಿಲ್ಲ. ಹಗರಣ ಬಯಲಿಗೆಳೆಯದಂತೆ ಗಡ್ಕರಿ ಒತ್ತಡ ಹೇರುತ್ತಿದ್ದರು ಎಂದು ಆಕೆ ಆರೋಪಿಸಿದ್ದರು.

ದಾಮಾನಿಯಾ ಅವರನ್ನು ಭೇಟಿಯಾಗಿಲ್ಲ ಎಂದು ಗಡ್ಕರಿ ಹೇಳುತ್ತಿದ್ದರು. ಗಡ್ಕರಿ ಹಾಗೂ ಪವಾರ್ ನಡುವಿನ ಸಂಬಂಧದ ಬಗ್ಗೆಗೂ ಬಿಜೆಪಿ ತಿರಸ್ಕರಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT