ನಿತೀಶ್ ಕುಮಾರ್ 
ದೇಶ

ಬಿಹಾರಕ್ಕೆ ವಿಶೇಷ ಸ್ಥಾನಮಾನ ಬೇಡಿಕೆ ಕೈ ಬಿಡಲ್ಲ- ನಿತಿಶ್ ಕುಮಾರ್

ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸಿ ಕಳೆದ 13 ವರ್ಷಗಳಿಂದ ಈ ಕ್ಷಣದವರೆಗೂ ಹೋರಾಟ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ಬೇಡಿಕೆಯನ್ನು ಕೈ ಬಿಡಲ್ಲ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಪಾಟ್ನಾ: ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸಿ ಕಳೆದ 13 ವರ್ಷಗಳಿಂದ ಈ ಕ್ಷಣದವರೆಗೂ ಹೋರಾಟ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ಬೇಡಿಕೆಯನ್ನು ಕೈ ಬಿಡಲ್ಲ ಎಂದು ಮುಖ್ಯಮಂತ್ರಿ ನಿತಿಶ್  ಕುಮಾರ್ ಹೇಳಿದ್ದಾರೆ.

ಪಾಟ್ನಾದಲ್ಲಿಂದು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸಿ 2005ರಲ್ಲಿಯೇ ಪ್ರಧಾನಿಗೆ ಪತ್ರ ಬರೆದಿದ್ದೆ. ಶೀಘ್ರದಲ್ಲಿಯೇ ವಿಶೇಷ ಸ್ಥಾನಮಾನ ಸಿಗುವ ಭರವಸೆಯಿದೆ. ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ಹೇರಲು ವಿಧಾನಸಭೆಯಲ್ಲಿ ನಿರ್ಣಯ ಕೂಡಾ ಅಂಗೀಕರಿಸಲಾಗಿದೆ ಎಂದು ತಿಳಿಸಿದರು.

ಆಂಧ್ರಪ್ರದೇಶದ ವಿಶೇಷ ಸ್ಥಾನಮಾನ ವಿಷಯಕ್ಕೆ ಸಂಬಂಧಿಸಿದಂತೆ ಟಿಡಿಪಿ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ನಂತರ ಇದೇ ರೀತಿಯ ಬೇಡಿಕೆ ಹೊಂದಿರುವ ಬಿಹಾರ ಈ ವಿಚಾರದಲ್ಲಿ ಮೌನವಾಗಿದೆ ಎಂದು ಆರ್ ಜಿಡಿ ವಾಗ್ದಾಳಿ ನಡೆಸಿತ್ತು.

ಆಗಾಗ್ಗೇ ಈ ಬೇಡಿಕೆಯನ್ನು ಪ್ರಸ್ತಾಪಿಸುತ್ತಾಲೇ ಬರಲಾಗಿದೆ. ಇದರಿಂದ ಒಂದು ಸೆಕೆಂಡ್ ಕೂಡಾ ತಪ್ಪಿಸಿಕೊಂಡಿಲ್ಲ.ಇದನ್ನು ಯಾರು  ಅರಿವಿಗೆ ತೆಗೆದುಕೊಂಡಿರಲಿಲ್ಲವೇ ಅವರೀಗ ನನ್ನ ಮೌನ ಬಗ್ಗೆ ಪ್ರಶ್ನಿಸುತ್ತಿರುವುದನ್ನು ನೋಡಿದ್ದರೆ ನಗು ಬರುತ್ತದೆ ಎಂದು ನಿತಿಶ್ ಕುಮಾರ್ ಹೇಳಿದರು

15 ನೇ ಹಣಕಾಸು ಆಯೋಗದ ಮುಂದೆಯೇ ಬಿಹಾರ ರಾಜ್ಯದ ವಿಶೇಷ ಸ್ಥಾನಮಾನಕ್ಕಾಗಿ ಬೇಡಿಕೆ ಇಟ್ಟಿರುವುದಾಗಿ ತಿಳಿಸಿದ ನಿತಿಶ್ ಕುಮಾರ್  ಬಿಹಾರಕ್ಕೆ ವಿಶೇಷ ಸ್ಥಾನಮಾನದ ಅಗತ್ಯವಿದೆ. ಬೇಡಿಕೆ ಈಡೇರಿಸಲು ಕಟ್ಟಿಬದ್ಧವಾಗಿವೆ. ಆದರೆ, ಮತಕೋಸ್ಕರ ವಿರೋಧಿಗಳು ಈ ವಿಚಾರದಲ್ಲಿ ಇಲ್ಲಸಲ್ಲದ ಟೀಕೆ ಮಾಡುತ್ತಿವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT