ಇರಾಕ್ ನಲ್ಲಿ ಹತ್ಯೆಯಾದ ಹರಿಸಿಮ್ರಾನ್ ಸಿಂಗ್ ಕುಟುಂಬ 
ದೇಶ

ಇರಾಕ್ ನಲ್ಲಿ ಹತ್ಯೆಯಾದ ಭಾರತೀಯರ ಮಾಹಿತಿಗಾಗಿ ಕುಟುಂಬಗಳ ಪರದಾಟ

ಪಂಜಾಬ್ ನ ಅಮೃತಸರ ಮತ್ತು ತರ್ನ್ ತರನ್ ಜಿಲ್ಲೆಯ 8 ಮಂದಿ ಇರಾಕ್ ನಲ್ಲಿ ಹತ್ಯೆಯಾಗಿರುವುದಾಗಿ ಮಂಗಳವಾರ ...

ಅಮೃತಸರ: ಪಂಜಾಬ್ ನ ಅಮೃತಸರ ಮತ್ತು ತರ್ನ್ ತರನ್ ಜಿಲ್ಲೆಯ 8 ಮಂದಿ ಇರಾಕ್ ನಲ್ಲಿ ಹತ್ಯೆಯಾಗಿರುವುದಾಗಿ ಮಂಗಳವಾರ ಖಚಿತಪಡಿಸಲಾಗಿದ್ದು, ಕಣ್ಣೀರಿಡುತ್ತಿರುವ ಕುಟುಂಬ ಸದಸ್ಯರು ಕಳೆದ ನಾಲ್ಕು ವರ್ಷಗಳಿಂದ ಅವರ ಮಾಹಿತಿಗಾಗಿ ಹೋರಾಟ ನಡೆಸಿದ್ದಾರೆ.
2014ರಲ್ಲಿ ಐಸಿಸ್ ನಿಂದ ಅಪಹರಣಕ್ಕೆ ಒಳಗಾಗಿ ಹತ್ಯೆಯಾದ 39 ಭಾರತೀಯರ ಪೈಕಿ ಪಂಜಾಬ್ ರಾಜ್ಯದ ಎರಡು ಜಿಲ್ಲೆಗಳ 8 ಮಂದಿ ಹತ್ಯೆಯಾಗಿದ್ದಾರೆ. 
ಆ ಎಂಟು ಮಂದಿಯನ್ನು ಕಳೆದುಕೊಂಡ ಕುಟುಂಬಗಳಿಗೆ ಈಗಲೂ ಅವರ ಬಗ್ಗೆ ಖಚಿತ ಮಾಹಿತಿ ಇಲ್ಲ. ಹೀಗಾಗಿ ಅವರು ಇನ್ನೂ ಬದುಕುಳಿದಿರುವ ನಿರೀಕ್ಷೆಯಲ್ಲಿದ್ದಾರೆ.
ನನ್ನ ಸಹೋದರ ಮಂಜಿಂದರ್ ಸಿಂಗ್ ಅವರು ಉದ್ದೋಗಕ್ಕಾಗಿ ಇರಾಕ್ ಗೆ ತೆರಳಿದ್ದರು. ಒಂದು ದಿನ ಆತನಿಂದ ದೂರವಾಣಿ ಕರೆ ಬಂತು. ನಾನು ಉಗ್ರರ ಕೃತ್ಯಗಳಿಂದಾಗಿ ಮರಳಿ ಬರಲು ಸಾಧ್ಯವಾಗದಂತಹ ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದು ಹೇಳಿದ್ದರು ಎಂದು ಆತನ ಸಹೋದರಿ ಮೆಹ್ತಾ ಗ್ರಾಮದ ನಿವಾಸಿ ಹೇಳಿದ್ದಾರೆ. ಅಲ್ಲದೆ ಈ ಕುರಿತು ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದರೂ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 2014 ರಲ್ಲಿ ಇರಾಕ್ ನಿಂದ ಐಸಿಸ್ ಅಪಹರಣ ಮಾಡಿದ್ದ 39 ಮಂದಿ ಭಾರತೀಯರನ್ನು ಐಸಿಸ್ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಇಂದು ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ. 
ಮೊಸುಲ್ ನಿಂದ ಅಪಹರಣ ಮಾಡಿದವರ ಹತ್ಯೆ ಕುರಿತು ಖಚಿತ ಮಾಹಿತಿ ಪಡಿಸಿಕೊಳ್ಳಲು ಆಳವಾದ ರೇಡಾರ್ ಬಳಕೆ ಮಾಡಲಾಗಿದ್ದು, ಹತ್ಯೆಯಾದ ಭಾರತೀಯ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ. ಅಲ್ಲದೇ ಎಲ್ಲರ ಮೃತದೇಹಗಳನ್ನು ಸಾಮೂಹಿಕವಾಗಿ ಸಮಾಧಿ ಮಾಡಲಾಗಿತ್ತು. ಮೃತ ದೇಹಗಳನ್ನು ಗುರುತಿಸಲು ಡಿಎನ್‍ಎ ಪರೀಕ್ಷೆಗಾಗಿ ಬಾಗ್ದಾದ್ ಗೆ ಕಳುಹಿಸಲಾಗಿದೆ. ಸೋಮವಾರ ನಮಗೆ ಲಭಿಸಿದ ಮಾಹಿತಿ ಪ್ರಕಾರ 39 ಮೃತದೇಹಗಳಲ್ಲಿ 38 ಮಂದಿಯ ಡಿಎನ್‍ಎ ಸ್ಯಾಪಲ್ ಮ್ಯಾಚ್ ಆಗಿದೆ. 39ನೇ ಮೃತ ದೇಹದ ಡಿಎನ್‍ಎ ಶೇ. 70 ರಷ್ಟು ಮ್ಯಾಚ್ ಆಗಿದೆ ಎಂದು ಸುಷ್ಮಾ ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

KSCA ಚುನಾವಣೆ: 191 ಮತಗಳ ಅಂತರದಿಂದ ಗೆದ್ದ ವೆಂಕಟೇಶ್ ಪ್ರಸಾದ್; ನೂತನ ಅಧ್ಯಕ್ಷರಾಗಿ ಆಯ್ಕೆ

SCROLL FOR NEXT