ವಿದ್ವಂಸಗೊಳಿಸಿರುವ ಪೆರಿಯಾರ್ ಪ್ರತಿಮೆ 
ದೇಶ

ತಮಿಳುನಾಡಿನ ಪುಡುಕೊಟ್ಟೈ ಜಿಲ್ಲೆಯಲ್ಲಿ ಪೆರಿಯಾರ್ ಪ್ರತಿಮೆ ವಿಧ್ವಂಸ

ತಮಿಳುನಾಡಿನ ಪುಡುಕೊಟ್ಟೈ ಜಿಲ್ಲೆಯ ಇಂದು ನಸುಕಿನಲ್ಲಿ ದುಷ್ಕರ್ಮಿಗಳು ದ್ರಾವಿಡ ನಾಯಕ ಪೆರಿಯಾರ್ ಅವರ ಪ್ರತಿಮೆಯನ್ನು ವಿಧ್ವಂಸಗೊಳಿಸಿದ್ದಾರೆ. ಪ್ರತಿಮೆಯ ತಲೆಭಾಗವನ್ನು ಕಡಿದು ಹೊತೊಯ್ಯಲಾಗಿದೆ.

ಪುಡುಕೊಟ್ಟೈ: ತಮಿಳುನಾಡಿನ ಪುಡುಕೊಟ್ಟೈ ಜಿಲ್ಲೆಯ ಇಂದು ನಸುಕಿನಲ್ಲಿ ದುಷ್ಕರ್ಮಿಗಳು ದ್ರಾವಿಡ ನಾಯಕ ಪೆರಿಯಾರ್ ಅವರ ಪ್ರತಿಮೆಯನ್ನು ವಿಧ್ವಂಸಗೊಳಿಸಿದ್ದಾರೆ.  ಪ್ರತಿಮೆಯ ತಲೆಭಾಗವನ್ನು ಕಡಿದು ಹೊತೊಯ್ಯಲಾಗಿದೆ.

 ಈ ಸುದ್ದಿ ತಿಳಿಯುತ್ತಿದ್ದಂತೆ  ಡಿಎಂಕೆ, ಎಂಡಿಎಂಕೆ, ಸಿಪಿಐ, ಸಿಪಿಎಂ ಸೇರಿದಂತೆ ವಿವಿಧ ಪಕ್ಷಗಳ ಕಾರ್ಯಕರ್ತರು ಹಾಗೂ ಪರಿಯಾರ್ ಅಭಿಮಾನಿಗಳು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಪ್ರಕ್ಷುಬ್ದ ವಾತವಾರಣ ನಿರ್ಮಾಣವಾಯಿತು.

ಡ್ರಾವಿಡ ಕಾಜಾಗಮ್  ವಲಯ ಅಧ್ಯಕ್ಷ ಪಿ. ರಾವಣನ್ ಅವರಿಂದ ಅಲಾಂಗುಡಿಯಿಂದ ಐದು ಕಿಲೋಮೀಟರ್ ದೂರದಲ್ಲಿ ಸ್ಥಾಪಿಸಲಾಗಿದ್ದ  ಈ ಪ್ರತಿಮೆ 8 ಅಡಿ ಎತ್ತರವಿದ್ದು, ಸಿಮೆಂಟ್ ನಿಂದ ನಿರ್ಮಾಣ ಮಾಡಲಾಗಿದೆ. 2013ರಲ್ಲಿ ಡಿಕೆ ಅಧ್ಯಕ್ಷ ಕೆ ವೀರಾಮಣಿ ಅವರಿಂದ ಪ್ರತಿಮೆ ಅನಾವರಣಗೊಳಿಸಲಾಗಿತ್ತು.

ಸುದ್ದಿ ತಿಳಿದು ಪೊಲೀಸ್ ಅಧಿಕಾರಗಳ ತಂಡ ಸ್ಥಳಕ್ಕೆ ಧಾವಿಸಿ ಯಾವುದೇ ಅಹಿತರ ಘಟನೆ ನಡೆಯದಂತೆ ಬಿಗಿ ಬಂಧೋಬಸ್ತ್ ಏರ್ಪಡಿಸಿದ್ದಾರೆ.  ಘಟನೆ ಖಂಡಿಸಿ ಪಕ್ಷದ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಲು ಡಿಕೆ ಕಾರ್ಯಕರ್ತರು ಚರ್ಚಿಸಿದ್ದಾರೆ.

ಗ್ರಾಮಸ್ಥರ ಒಪ್ಪಿಗೆಯಿಂದಲೇ ಪ್ರತಿಮೆ ಸ್ಥಾಪಿಸಲಾಗಿದೆ. ಆದರೆ, ಹೊರಗಿನವರಿಂದ ಪ್ರತಿಮೆಯನ್ನು  ಹಾನಿಗೊಳಿಸಲಾಗಿದೆ ಎಂದು ಡಿಕೆ ಕಾರ್ಯಕರ್ತರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿರುವ ಕೆಲ ಪೆರಿಯಾರ್ ಪ್ರತಿಮೆಗಳಿಗೆ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT