ಚಂದ್ರಬಾಬು ನಾಯ್ಡು 
ದೇಶ

ಸಂಸತ್ತಿನಲ್ಲಿ ಕೇಂದ್ರದ ವಿರುದ್ಧ ಹೋರಾಟ ಮುಂದುವರೆಸಿ: ಟಿಡಿಪಿ ಸಂಸದರಿಗೆ ನಾಯ್ಡು ಸೂಚನೆ

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸಿ ಸಂಸತ್ತಿನ ನೀವು ನಡೆಸುತ್ತಿರುವ ಹೋರಾಟವನ್ನು....

ಅಮರಾವತಿ: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸಿ ಸಂಸತ್ತಿನ ನೀವು ನಡೆಸುತ್ತಿರುವ ಹೋರಾಟವನ್ನು ದುರ್ಬಲಗೊಳಿಸಬೇಡಿ ಎಂದು ಡಿಟಿಪಿ ಸಂಸದರಿಗೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸೋಮವಾರ ಸೂಚಿಸಿದ್ದಾರೆ.
ಇಂದು ಸಂಜೆ ಟೆಲೆಕಾನ್ಫೆರೆನ್ಸ್ ಮೂಲಕ ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಟಿಡಿಪಿ ಮುಖ್ಯಸ್ಥ, ಯಾವುದೇ ಕಾರಣಕ್ಕೆ ಕೇಂದ್ರ ವಿರುದ್ಧದ ನಮ್ಮ ಹೋರಾಟ ದುರ್ಬಲಗೊಳ್ಳಬಾರದು. ನಮಗೆ ಸಾರ್ವಜನಿಕ ಹಿತಾಸಕ್ತಿಯೇ ಮುಖ್ಯ. ರಾಜಿ ಮಾಡಿಕೊಳ್ಳದೆ ನಮ್ಮ ಹಕ್ಕಿಗಾಗಿ ಹೋರಾಟ ಮುಂದುವರೆಸಿ ಎಂದು ಕರೆ ನೀಡಿದ್ದಾರೆ.
ಕೇಂದ್ರದ ವಿರುದ್ಧದ ನಮ್ಮ ಹೋರಾಟಕ್ಕೆ ಎಲ್ಲಾ ಪಕ್ಷಗಳಿಂದ ಬೆಂಬಲ ಸಿಗುತ್ತಿದ್ದು, ಇದೇ ಉತ್ಸಾಹದಲ್ಲಿ ಹೋರಾಟ ಮುಂದುವರೆಸಿ. ನಿಮ್ಮೊಂದಿಗೆ ಆಂಧ್ರದ 5 ಕೋಟಿ ಜನರಿದ್ದಾರೆ ಎಂದು ನಾಯ್ಡು ಸಂಸದರಿಗೆ ಹೇಳಿದ್ದಾರೆ. ಅಲ್ಲದೆ ಎಲ್ಲಾ ಟಿಡಿಪಿ ಸಂಸದರು ಸಂಸತ್ ಕಲಾಪಕ್ಕೆ ಕಡ್ಜಾಯವಾಗಿ ಹಾಜರಿರಬೇಕು ಎಂದು ಸೂಚಿಸಿದ್ದಾರೆ.
ಇಂದು ಲೋಕಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆಯೇ ಮೋದಿ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ನೀಡಬೇಕೆಂದು ಟಿಡಿಪಿ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರು ಪಟ್ಟು ಹಿಡಿದರು. ಆದರೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಅದಕ್ಕೆ ಅವಕಾಶ ನೀಡದಿದ್ದರಿಂದ, ಟಿಡಿಪಿ ಹಾಗೂ ವೈಎಸ್ ಆರ್ ಕಾಂಗ್ರೆಸ್ ಸಂಸದರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರಿಂದ ಸ್ಪೀಕರ್ ಕಲಾಪವನ್ನು ನಾಳೆಗೆ ಮುಂದೂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT