ಎಐಎಡಿಎಂಕೆ ಉಚ್ಛಾಟಿತ ಮುಖ್ಯಸ್ಥೆ ವಿ.ಕೆ.ಶಶಿಕಲಾ 
ದೇಶ

ಪತಿ ನಟರಾಜನ್ ನಿಧನ: 15 ದಿನಗಳ ಪೆರೋಲ್'ಗೆ ಶಶಿಕಲಾ ಅರ್ಜಿ

ಪತಿ ನಟರಾಜನ್ ಅವರು ನಿಧನ ಹೊಂದಿರುವ ಹಿನ್ನಲೆಯಲ್ಲಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಲುವಾಗಿ 15 ದಿನಗಳ ಪೆರೋಲ್'ಗೆ ಅನುಮತಿ ನೀಡುವಂತೆ ಉಚ್ಛಾಟಿತ ಎಐಎಡಿಎಂಕೆ ಮುಖ್ಯಸ್ಥ ವಿ.ಕೆ.ಶಶಿಕಲಾ ಅವರು ಅರ್ಜಿ ಸಲ್ಲಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ಬೆಂಗಳೂರು: ಪತಿ ನಟರಾಜನ್ ಅವರು ನಿಧನ ಹೊಂದಿರುವ ಹಿನ್ನಲೆಯಲ್ಲಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಲುವಾಗಿ 15 ದಿನಗಳ ಪೆರೋಲ್'ಗೆ ಅನುಮತಿ ನೀಡುವಂತೆ ಎಐಎಡಿಎಂಕೆ ಉಚ್ಛಾಟಿತ ಮುಖ್ಯಸ್ಥೆ ವಿ.ಕೆ.ಶಶಿಕಲಾ ಅವರು ಅರ್ಜಿ ಸಲ್ಲಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ಅಕ್ರಮ ಆಸ್ತಿ ಗಳಿಗೆ ಪ್ರಕರಣದಲ್ಲಿ ದೋಷಿಯಾಗಿರುವ ಶಶಕಲಾ ಅವರು ನಗರದ ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಲ್ಲಿ 4 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಪತಿಯ ನಿಧರನ ಹಿನ್ನಲೆಯಲ್ಲಿ ಪೆರೋಲ್ ಮೇಲೆ ಹೊರಗೆ ಬರಲಿರುವ ಶಶಿಕಲಾ ಅವರು ಚೆನ್ನೈನತ್ತ ಪ್ರಯಾಣ ಬೆಳೆಸಲಿದ್ದಾರೆ. 
ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟರಾಜನ್ ಅವರನ್ನು ನೋಡುವ ಸಲುವಾಗಿ ಶಶಿಕಲಾ ಅವರು 5 ದಿನಗಳ ಪೆರೋಲ್ ಪಡೆದು ಹೊರಗೆ ಬಂದಿದ್ದರು. 
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶಶಿಕಲಾ ಅವರ ಪತಿ ನಟರಾಜನ್ ಅವರು ಚೆನ್ನೈನ ಗ್ಲೆನೇಗಲ್ಸ್ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನ ಹೊಂದಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT