ಸಂಗ್ರಹ ಚಿತ್ರ 
ದೇಶ

ಜೆಡಿಯು ಮತ್ತು ಬಿಜೆಪಿ ಪಕ್ಷಗಳು ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆಯ ಸೇವೆ ಪಡೆದಿದ್ದವು: ರಣ್ ದೀಪ್ ಸುರ್ಜೇವಾಲಾ

ಜೆಡಿಯು ಮತ್ತು ಬಿಜೆಪಿ ಮೈತ್ರಿಕೂಟ 2014ಕ್ಕೂ ಮೊದಲೇ ಅಂದರೆ 2010ರ ಬಿಹಾರ ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆಯ ಸೇವೆ ಪಡೆದಿತ್ತು ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ನವದೆಹಲಿ: ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆಯಿಂದ ಫೇಸ್ ಬುಕ್ ಮಾಹಿತಿ ಸೋರಿಕೆ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಜೆಡಿಯು ಮತ್ತು ಬಿಜೆಪಿ ಮೈತ್ರಿಕೂಟ 2014ಕ್ಕೂ ಮೊದಲೇ ಅಂದರೆ 2010ರ ಬಿಹಾರ ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆಯ ಸೇವೆ ಪಡೆದಿತ್ತು ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಫೇಸ್ ಬುಕ್ ದತ್ತಾಂಶ ಸೋರಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕೈವಾಡವಿದೆ ಎಂಬ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರ ಹೇಳಿಕೆಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪಕ್ಷದ ಮುಖಂಡ ರಣ್ ದೀಪ್ ಸುರ್ಜೇವಾಲಾ ಅವರು, ಕಾಂಗ್ರೆಸ್ ಪಕ್ಷ ಯಾವುದೇ ಮೂಲದಿಂದಲೂ ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆಯ ಸೇವೆ ಪಡೆದಿಲ್ಲ. ಆದರೆ 2010ರಲ್ಲಿ ಬಿಜೆಪಿ ಮಿತ್ರ ಪಕ್ಷ ಜೆಡಿಯು ಈ ಸಂಸ್ಥೆಯ ಸೇವೆ ಪಡೆದಿತ್ತು ಎಂದು ಆರೋಪಿಸಿದ್ದಾರೆ.
"ಕೇಂಬ್ರಿಡ್ಜ್ ಅನಲಿಟಿಕ್ಸ್ ಸಂಸ್ಥೆಯಿಂದ ರಾಹುಲ್ ಗಾಂಧಿಯಾಗಲೀ ಅಥವಾ ಕಾಂಗ್ರೆಸ್ ಪಕ್ಷವಾಗಲಿ ಯಾವುದೇ ರೀತಿಯ ಸೇವೆ ಪಡೆದಿಲ್ಲ. ಬಿಜೆಪಿಯ ರವಿಶಂಕರ್ ಪ್ರಸಾದ್ ಅವರು ಜನರ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದು, ಸ್ವತ- ಬಿಜೆಪಿ ಪಕ್ಷವೇ ಸುಳ್ಳಿನ ಕಂತೆಗಳ ಕಾರ್ಖಾನೆಯಾಗಿದ್ದು, ದಿನಕ್ಕೊಂದು ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ನಕಲಿ ಹೇಳಿಕೆಗಳು, ನಕಲಿ ಪತ್ರಿಕಾ ಗೋಷ್ಠಿಗಳು, ನಕಲಿ ಅಜೆಂಡಾಗಳು ಇವೆಲ್ಲಾ ಬಿಜೆಪಿ ಲಕ್ಷಣಗಳಾಗಿವೆ ಎಂದು  ಸುರ್ಜೇವಾಲಾ ಹೇಳಿದ್ದಾರೆ.
ಅಂತೆಯೇ ಕೇಂಬ್ರಿಡ್ಜ್ ಅನಲಿಟಿಕ್ಸ್ ಸಂಸ್ಥೆಯ ಸಂಪರ್ಕವಿರುವ ವೆಬ್ ಸೈಟ್ ಗಳಲ್ಲಿ ಬಿಜೆಪಿ ಮತ್ತು ಜೆಡಿಯು ಪಕ್ಷಗಳು ಈ ಸಂಸ್ಥೆಯ ಸೇವೆ ಪಡೆದಿರುವ ಕುರಿತು ದತ್ತಾಂಶಗಳು ಲಭ್ಯವಾಗಿದ್ದು, ಕೇಂಬ್ರಿಡ್ಜ್ ಅನಲಿಟಿಕ್ಸ್ ಸಂಸ್ಥೆ ತನ್ನ ಭಾರತೀಯ ಪಾಲುದಾರ ಸಂಸ್ಥೆಯಾಗಿರುವ ಒವ್ಲೆನೆ ಬಿಸಿನಿಸ್ ಇಂಟೆಲಿಜೆನ್ಸ್ ಸಂಸ್ಥೆಯ ಮೂಲಕ ಕಾರ್ಯಾಚರಣೆ ನಡೆಸಿತ್ತು. ಈ ಕಾರ್ಯಾಚರಣೆಗೆ ಬಿಜೆಪಿ ಮೈತ್ರಿಕೂಟದ ಪ್ರಭಾವಿ ಸಂಸದನ ಪುತ್ರ ನೇತೃತ್ವ ವಹಿಸಿಕೊಂಡಿದ್ದ. ಇದೇ ಸಂಸ್ಥೆಯ ಸೇನೆಯನ್ನು 2009ರಲ್ಲಿ ಹಾಲಿ ಕೇಂದ್ರ ಸಚಿವ ರಾಜ್ ನಾಥ್ ಸಿಂಗ್ ಅವರೂ ಕೂಡ ಬಳಕೆ ಮಾಡಿಕೊಂಡಿದ್ದರು ಎಂದು ರಣ್ ದೀಪ್ ಸುರ್ಜೇವಾಲಾ ಗಂಭೀರ ಆರೋಪ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಸಿದ್ದರಾಮಯ್ಯ ಮಾಹಿತಿ; ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT