ರಾಜ್ ಬಬ್ಬರ್ 
ದೇಶ

ಗುಜರಾತ್ ಬಳಿಕ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜಿನಾಮೆ?

ಯುವಕರಿಗೆ ರಾಜಕಾರಣದಲ್ಲಿ ಹೆಚ್ಚು ಅವಕಾಶ ನೀಡಬೇಕೆಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕರೆಗೆ ಓಗೊಟ್ಟು ಗೋವಾ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಶಾಂತಾರಾಮ್ ನಾಯ್ಕ್...

ಲಖನೌ: ಯುವಕರಿಗೆ ರಾಜಕಾರಣದಲ್ಲಿ ಹೆಚ್ಚು ಅವಕಾಶ ನೀಡಬೇಕೆಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕರೆಗೆ ಓಗೊಟ್ಟು ಗೋವಾ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಶಾಂತಾರಾಮ್ ನಾಯ್ಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇದರ ಬೆನ್ನಲ್ಲೇ ಉತ್ತರಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 
ಉತ್ತರಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಅವರು ಮಂಗಳವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಅವರ ರಾಜಿನಾಮೆಯನ್ನು ಪಕ್ಷ ಪರಿಗಣಿಸಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. 
ಇತ್ತೀಚೆಗೆ ಉತ್ತರಪ್ರದೇಶದ ಗೋರಖ್ ಪುರ ಮತ್ತು ಫುಲ್ಪರ್ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನೀಡಿದ ಕಳಪೆ ಪ್ರದರ್ಶನದ ನಂತರ ಈ ಬೆಳವಣಿಗೆ ಸಂಭವಿಸಿದೆ. ರಾಜ್ ಬಬ್ಬರ್ ರಾಜಿನಾಮೆ ಕರಿತು ಯಾವುದೇ ಅಧಿಕೃತ ಘೋಷಣೆ ಹೊರಬಂದಿಲ್ಲ. 
ರಾಜ್ ಬಬ್ಬರ್ ಸ್ಥಾನಕ್ಕೆ ಬ್ರಾಹ್ಮಣ ಸಮುದಾಯದ ನಾಯಕರಾದ ಜಿತಿನ್ ಪ್ರಸಾದ್, ರಾಜೇಶ್ ಮಿಶ್ರಾ ಮತ್ತು ಲಲಿತೇಶ್ಪತಿ ತ್ರಿಪಾಠಿ ಅವರನ್ನು ನೇಮಿಸುವ ಸಾಧ್ಯತೆ ಇದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT