ರಾಜ್ ಬಬ್ಬರ್ 
ದೇಶ

ಗುಜರಾತ್ ಬಳಿಕ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜಿನಾಮೆ?

ಯುವಕರಿಗೆ ರಾಜಕಾರಣದಲ್ಲಿ ಹೆಚ್ಚು ಅವಕಾಶ ನೀಡಬೇಕೆಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕರೆಗೆ ಓಗೊಟ್ಟು ಗೋವಾ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಶಾಂತಾರಾಮ್ ನಾಯ್ಕ್...

ಲಖನೌ: ಯುವಕರಿಗೆ ರಾಜಕಾರಣದಲ್ಲಿ ಹೆಚ್ಚು ಅವಕಾಶ ನೀಡಬೇಕೆಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕರೆಗೆ ಓಗೊಟ್ಟು ಗೋವಾ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಶಾಂತಾರಾಮ್ ನಾಯ್ಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇದರ ಬೆನ್ನಲ್ಲೇ ಉತ್ತರಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 
ಉತ್ತರಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಅವರು ಮಂಗಳವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಅವರ ರಾಜಿನಾಮೆಯನ್ನು ಪಕ್ಷ ಪರಿಗಣಿಸಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. 
ಇತ್ತೀಚೆಗೆ ಉತ್ತರಪ್ರದೇಶದ ಗೋರಖ್ ಪುರ ಮತ್ತು ಫುಲ್ಪರ್ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನೀಡಿದ ಕಳಪೆ ಪ್ರದರ್ಶನದ ನಂತರ ಈ ಬೆಳವಣಿಗೆ ಸಂಭವಿಸಿದೆ. ರಾಜ್ ಬಬ್ಬರ್ ರಾಜಿನಾಮೆ ಕರಿತು ಯಾವುದೇ ಅಧಿಕೃತ ಘೋಷಣೆ ಹೊರಬಂದಿಲ್ಲ. 
ರಾಜ್ ಬಬ್ಬರ್ ಸ್ಥಾನಕ್ಕೆ ಬ್ರಾಹ್ಮಣ ಸಮುದಾಯದ ನಾಯಕರಾದ ಜಿತಿನ್ ಪ್ರಸಾದ್, ರಾಜೇಶ್ ಮಿಶ್ರಾ ಮತ್ತು ಲಲಿತೇಶ್ಪತಿ ತ್ರಿಪಾಠಿ ಅವರನ್ನು ನೇಮಿಸುವ ಸಾಧ್ಯತೆ ಇದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT