ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 
ದೇಶ

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ನಿಲುವಳಿ ಸೂಚನೆ ಮಂಡನೆಗೆ ಕಾಂಗ್ರೆಸ್ ನಿರ್ಧಾರ

ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ನಿಲುವಳಿ ಸೂಚನೆ ...

ನವದೆಹಲಿ: ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ನಿಲುವಳಿ ಸೂಚನೆ ಮಂಡಿಸಲಾಗುವುದು ಎಂದು ಕಾಂಗ್ರೆಸ್ ಪ್ರಕಟಿಸಿದೆ. ಇರಾಕ್ ನಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆಯಿಂದ ಹತರಾದ ಭಾರತೀಯರ ಕುಟುಂಬವನ್ನು ಹಾದಿತಪ್ಪಿಸುವ ಕೆಲಸವನ್ನು ಸಚಿವೆ ಸುಷ್ಮಾ ಸ್ವರಾಜ್ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಳೆದ ಮಂಗಳವಾರ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದ ಸಚಿವೆ ಸುಷ್ಮಾ ಸ್ವರಾಜ್, ಐಎಸ್ ಉಗ್ರಗಾಮಿಗಳಿಂದ 2014ರಲ್ಲಿ ಅಪಹರಿಸಲ್ಪಟ್ಟ 39 ಭಾರತೀಯರನ್ನು ಕೊಲ್ಲಲಾಗಿದೆ ಎಂದು ಹೇಳಿದ್ದರು. ಅದೇ 4 ವರ್ಷಗಳ ಹಿಂದೆ ಸಚಿವೆ ಅಪಹರಕ್ಕೀಡಾದ ಭಾರತೀಯರು ಜೀವಂತವಾಗಿದ್ದರು ಎಂದು ಹೇಳಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ.

39 ಭಾರತೀಯರ ಕುಟುಂಬದವರು ಮತ್ತು ಸದನ ಸದಸ್ಯರನ್ನು ಹಾದಿತಪ್ಪಿಸಿದ ವಿದೇಶಾಂಗ ಸಚಿವೆ ವಿರುದ್ಧ ನಿಲುವಳಿ ಸೂಚನೆ ಮಂಡಿಸಲು ನಾವು ನಿರ್ಧರಿಸಿದ್ದೇವೆ ಎಂದು ಕಾಂಗ್ರೆಸ್ ಹಿರಿಯ ನಾಯಕಿ ಅಂಬಿಕಾ ಸೋನಿ ತಿಳಿಸಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಕೂಡ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಟೀಕಿಸಿದ್ದು ತಪ್ಪು ಮಾಹಿತಿ ನೀಡಿ ಹಾದಿತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದರು.

39 ಮಂದಿ ಭಾರತೀಯರಲ್ಲಿ ಅತಿ ಹೆಚ್ಚಿನವರು ಪಂಜಾಬ್ ಮೂಲದವರಾಗಿದ್ದು ಇರಾಕ್ ನ ಮೊಸಲ್ ನಲ್ಲಿ ಕೆಲಸ ಮಾಡುತ್ತಿದ್ದು 2014ರಲ್ಲಿ ತಮ್ಮ ಸ್ಥಳಾಂತರಿಸುವಾಗ ಅಪಹರಿಸಲ್ಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!