ವೀರಭದ್ರ ಸಿಂಗ್ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಹಿಮಾಚಲ ಪ್ರದೇಶ ಮಾಜಿ ಸಿಎಂ ವೀರಭದ್ರ ಸಿಂಗ್ ಗೆ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 
ದೆಹಲಿಯ ಪಟಿಯಾಲ ಕೋರ್ಟ್, 50,000 ರೂಪಯಿ ಬಾಂಡ್,  ಅಷ್ಟೇ ಮೊತ್ತದ ಶ್ಯೂರಿಟಿ ನೀಡುವಂತೆ ಕೋರ್ಟ್ ವೀರಭದ್ರ ಸಿಂಗ್ ಹಾಗೂ ಅವರ ಪತ್ನಿ ಪ್ರತಿಭಾ ಸಿಂಗ್ ಗೆ ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಏ.25 ಕ್ಕೆ ನಿಗದಿಪಡಿಸಿದೆ.   ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಪ್ರಕಾರ ಜಾರಿ ನಿರ್ದೇಶನಾಲಯ ವೀರಭದ್ರ ಸಿಂಗ್ ಹಾಗೂ ಅವರ ಪತ್ನಿ ವಿರುದ್ಧ ಫೆಬ್ರವರಿ ತಿಂಗಳಲ್ಲಿ ಪ್ರಕರಣ ದಾಖಲಿಸಿತ್ತು. 
ಅಕ್ರಮ ಆಸ್ತಿ ಸಂಪಾದನೆ ಹಾಗೂ 7 ಕೋಟಿಯಷ್ಟು ಆದಾಯವನ್ನು ಕೃಷಿಯಿಂದ ಬಂದದ್ದು ಎಂದು ವೀರಭದ್ರ ಸಿಂಗ್ ತಮ್ಮ ಹಾಗೂ ತಮ್ಮ ಪತ್ನಿಯ ಆದಾಯದ ಮೂಲಕ್ಕೆ ಸಮರ್ಥನೆ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರಭದ್ರ ಸಿಂಗ್ ಹಾಗೂ ಅವರ ಯೂನಿವರ್ಸಲ್ ಆಪಲ್ ಅಸೋಸಿಯೇಟೆಡ್ ಮಾಲೀಕರಾದ ಚುನ್ನಿ ಲಾಲ್ ಚೌಹಾಣ್, ಎಲ್ಐಸಿ ಏಜೆಂಟ್ ಆನಂದ್ ಚೌಹಾಣ್ ಮತ್ತು ಇಬ್ಬರು ಸಹ-ಆರೋಪಿಗಳು ಪ್ರೇಮ್ ರಾಜ್ ಮತ್ತು ಲಾವನ್ ಕುಮಾರ್ ರೋಚ್ ವಿರುದ್ಧ ಪ್ರಕರಣ ದಾಖಲಾಗಿತ್ತು. 
ಇದರ ಜೊತೆಗೆ ಸಿಬಿಐ ಸಹ ವೀರಭದ್ರ ಸಿಂಗ್ ವಿರುದ್ಧ 10 ಕೋಟಿ ರೂಪಾಯಿಯಷ್ಟು ಅಕ್ರಮ ಅಸ್ತಿ ಸಂಪಾದನೆ ಮಾಡಿರುವ ಆರೋಪ ಹೊರಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT