ರೋಹಿಣಿ ಸಿಂಧೂರಿ 
ದೇಶ

ರೋಹಿಣಿ ಸಿಂಧೂರಿ ಅರ್ಜಿ ವಜಾಗೊಳಿಸಿದ ಸಿಎಟಿ: ಶೀಘ್ರವೇ ವರ್ಗಾವಣೆ ಸಾಧ್ಯತೆ

ಮಾ.07 ರಂದು ಸರ್ಕಾರ ತಮ್ಮನ್ನು ವರ್ಗಾವಣೆಗೊಳಿಸಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂನಿ ಅವರ ಅರ್ಜಿಯನ್ನು ಸಿಎಟಿ ವಜಾಗೊಳಿಸಿದೆ.

ಬೆಂಗಳೂರು: ಮಾ.07 ರಂದು ಸರ್ಕಾರ ತಮ್ಮನ್ನು ವರ್ಗಾವಣೆಗೊಳಿಸಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂನಿ ಅವರ ಅರ್ಜಿಯನ್ನು ಸಿಎಟಿ ವಜಾಗೊಳಿಸಿದೆ. 
ವರ್ಗಾವಣೆಯನ್ನು ಪ್ರಶ್ನಿಸಿ ಸೂಕ್ತ ಕಾರಣಗಳೊಂದಿಗೆ ಮುಖ್ಯಕಾರ್ಯದರ್ಶಿಗಳಿಗೆ ಪತ್ರದ ಮೂಲಕ ತಿಳಿಸಿ ಎಂದು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರೋಹಿಣಿ ಸಿಂಧೂರಿ ಅವರಿಗೆ ಸೂಚನೆ ನೀಡಿದ್ದು, ಇದಕ್ಕಾಗಿ ಮಾ.26 ವರೆಗೂ ಗಡುವು ನೀಡಿದೆ. ಅಲ್ಲಿಯವರೆಗೂ ಸಹ ರೋಹಿಣಿ ಸಿಂಧೂನಿ ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರೆಯಲಿದ್ದಾರೆ. 
ಮಾ.26 ರ ನಂತರ ರೋಹಿಣಿ ಸಿಂಧೂರಿ ವರ್ಗಾವಣೆಯಾಗುವ ಸಾಧ್ಯತೆ ಇದ್ದು, ಈ ಆದೇಶದಿಂದ ಎರಡು ತಿಂಗಳಿಂದ ನಡೆಯುತ್ತಿದ್ದ ಜಿಲ್ಲಾಧಿಕಾರಿ ಹಾಗೂ ಸರ್ಕಾರದ ನಡುವಿನ ವಿವಾದವನ್ನು ಬಗೆಹರಿಯುವ ಸಾಧ್ಯತೆ ಇದೆ.  ಈ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭ ಪ್ರತಿಕ್ರಿಯೆ ನೀಡಿದ್ದು ಸಿಎಟಿ ಆದೇಶ ತನ್ನೂ ತಮಗೆ ತಲುಪಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಹಿಳಾ ವಿಶ್ವಕಪ್ 2025: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 53 ರನ್‌ಗಳ ಭರ್ಜರಿ ಜಯ, ಸೆಮಿಫೈನಲ್‌ಗೆ INDIA ಲಗ್ಗೆ!

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೇ ಅಮೆರಿಕದ ಬೆಂಬಲ ಕಳಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ

ರಕ್ಷಣಾ ವಲಯಕ್ಕೆ 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ!

ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆ ಆರಂಭ: ಯಾರಾಗಲಿದ್ದಾರೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ?

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎರಡ್ಮೂರು ದಿನಗಳಲ್ಲಿ AAI ವರದಿ ಸಲ್ಲಿಕೆ- ಎಂ.ಬಿ ಪಾಟೀಲ್

SCROLL FOR NEXT