ಕಾರ್ತಿ ಚಿದಂಬರಂ 
ದೇಶ

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿಕ್ ಚಿದಂಬರಂಗೆ ಷರತ್ತುಬದ್ಧ ಜಾಮೀನು

ಐಎನ್ಎಕ್ಸ್ ಮೀಡಿಯಾ ಸಂಸ್ಥೆಯಲ್ಲಿ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದ ಸಂಬಂಧ ಬಂಧನಕ್ಕೊಳಗಾಗಿರುವ ಕಾರ್ತಿ ಚಿದಂಬರಂ ಅವರಿಗೆ ದೆಹಲಿ ಹೈಕೋರ್ಟ್...

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಸಂಸ್ಥೆಯಲ್ಲಿ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದ ಸಂಬಂಧ ಬಂಧನಕ್ಕೊಳಗಾಗಿರುವ ಕಾರ್ತಿ ಚಿದಂಬರಂ ಅವರಿಗೆ ದೆಹಲಿ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 
ದೆಹಲಿ ಹೈಕೋರ್ಟ್ ಕಾರ್ತಿಕ್ ಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದು 10 ಲಕ್ಷ ಮೌಲ್ಯದ ಬಾಂಡ್ ನೀಡುವಂತೆ ಹಾಗೂ ದೇಶ ಬಿಟ್ಟು ತೆರಳದಂತೆ ಸೂಚನೆ ನೀಡಿದೆ. 
ಕಳೆದ ಫೆಬ್ರವರಿ 28ರಂದು ಲಂಡನ್ ನಿಂದ ವಾಪಸ್ ಆಗುತ್ತಿದ್ದರಂತೆ ಚೆನ್ನೈನ ವಿಮಾನ ನಿಲ್ದಾಣದಲ್ಲಿ  ಕಾರ್ತಿ ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. 
ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಚಿದಂಬರಂ ಸಚಿವರಾಗಿದ್ದರು, ಈ ವೇಳೆ ಐಎನ್ಎಕ್ಸ್ ಮೀಡಿಯಾ ಸಂಸ್ಥೆ ಹಗರಣ ನಡೆದಿತ್ತು. ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಅಡಿ ಕಾರ್ತಿ ಚಿದಂಬರಂ ವಿರುದ್ಧ ಇಡಿ ಮೇ, 2017ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಉಲ್ಲಂಘನೆ ಆರೋಪದಲ್ಲಿ ಕಾರ್ತಿ ಚಿದಂಬರಂ ನನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT