ಸಾಂದರ್ಭಿಕ ಚಿತ್ರ 
ದೇಶ

ರಾಜ್ಯಸಭೆ ಚುನಾವಣೆ: ಜೈಲಿನಲ್ಲಿರುವ ಬಿಎಸ್ಪಿ, ಎಸ್ಪಿ ಶಾಸಕರ ಮತದಾನಕ್ಕೆ ಕೋರ್ಟ್ ನಿರ್ಬಂಧ

ರಾಜ್ಯಸಭೆ ಚುನಾವಣೆಯಲ್ಲಿ ಏಕೈಕ ಬಿಎಸ್ಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದ ಪ್ರತಿಪಕ್ಷ ಸಮಾಜವಾದಿ ಪಕ್ಷ ಮತ್ತು ಬಹುಜನ ...

ಲಖನೌ: ರಾಜ್ಯಸಭೆ ಚುನಾವಣೆಯಲ್ಲಿ ತಲಾ ಒಂದು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದ ಪ್ರತಿಪಕ್ಷಗಳಾದ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷದ ಮೈತ್ರಿಗೆ ಭಾರಿ ಹಿನ್ನೆಡೆಯಾಗಿದೆ.
ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಿಎಸ್ಪಿ ಶಾಸಕ ಮುಖ್ತಾರ್ ಅನ್ಸಾರಿ ಅವರಿಗೆ ರಾಜ್ಯಸಭೆ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ನೀಡಲು ಅಲಹಬಾದ್ ಹೈಕೋರ್ಟ್ ನಿರಾಕರಿಸಿದೆ. 
ಇನ್ನು ಫಿರೋಜಾಬಾದ್ ಜೈಲಿನಲ್ಲಿರುವ ಎಸ್ಪಿ ಶಾಸಕ ಹರಿಓಂ ಯಾದವ್ ಅವರಿಗೂ ಮತದಾನಕ್ಕೆ ಅವಕಾಶ ನೀಡಲು ಫಿರೋಜಾಬಾದ್ ವಿಶೇಷ ಕೋರ್ಟ್ ನಿರಾಕರಿಸಿದೆ.
ನಾಳೆ ಉತ್ತರ ಪ್ರದೇಶ ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ ನಡೆಯುತ್ತಿದ್ದು, ಬಿಎಸ್ಪಿಯಿಂದ ಭೀಮ ರಾವ್ ಅಂಬೇಡ್ಕರ್ ಹಾಗೂ ಎಸ್ಪಿಯಿಂದ ಜಯಾ ಬಚ್ಚನ್ ಅವರು ಸ್ಪರ್ಧಿಸಿದ್ದಾರೆ. ವಿಧಾನಸಭೆಯಲ್ಲಿ ಎಸ್ಪಿ 46 ಹಾಗೂ ಬಿಎಸ್ಪಿ 19 ಶಾಸಕರನ್ನು ಹೊಂದಿದೆ. 7 ಕಾಂಗ್ರೆಸ್ ಹಾಗೂ ಒಂದು ಆರ್ ಎಲ್ ಡಿ ಸೇರಿ ಪ್ರತಿಪಕ್ಷಗಳ ಬಲ ಒಟ್ಟು 73 ಇದೆ. ಆದರೆ ಇಬ್ಬರು ಅಭ್ಯರ್ಥಿಗಳನ್ನು ಗೆಲ್ಲಿಸಲು ತಲಾ 37 ಮತಗಳ ಅಗತ್ಯವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT