ಮದುಮಗ ಬ್ರಿಜೇಶ್ 
ದೇಶ

ಕೇರಳ ಮರ್ಯಾದಾ ಹತ್ಯೆ: ನೊಂದ ವರ ಮದುವೆ ಸೀರೆಯಿಂದ ನೇಣಿಗೆ ಶರಣು!

ಮದುವೆಗೆ ಕೆಲವೇ ಕೆಲವು ಗಂಟೆಗಳು ಬಾಕಿಯಿರುವಾಗಲೇ ತನ್ನ 22 ವರ್ಷದ ಮಗಳನ್ನು ತಂದೆಯೇ ಹತ್ಯೆ ಮಾಡಿದ್ದರು. ಇದರಿಂದ ನೊಂದ ವರ ವಧುವಿಗೆ ತಂದಿದ್ದ...

ಮಲ್ಲಾಪುರಂ: ಮದುವೆಗೆ ಕೆಲವೇ ಕೆಲವು ಗಂಟೆಗಳು ಬಾಕಿಯಿರುವಾಗಲೇ ತನ್ನ 22 ವರ್ಷದ ಮಗಳನ್ನು ತಂದೆಯೇ ಹತ್ಯೆ ಮಾಡಿದ್ದರು. ಇದರಿಂದ ನೊಂದ ವರ ವಧುವಿಗೆ ತಂದಿದ್ದ ಸೀರೆಯಿಂದಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. 
ಕೇರಳದ ಅರೆಕೋಡ್ ನ ಪಾತನಾಪುರಂನ ಪೋವತಿಂಗಲ್ ನಿವಾಸಿಯಾಗಿದ್ದ ರಾಜನ್ ಎಂಬುವರು ದಲಿತ ಯುವಕನಿಗೆ ತನ್ನ ಮಗಳನ್ನು ಮದುವೆ ಮಾಡಿಕೊಡಲು ಇಷ್ಟವಿಲ್ಲದೆ ಮದುವೆಗೆ ಕೆಲ ಘಂಟೆಗಳು ಬಾಕಿ ಇರುವಾಗಲೇ ಮರ್ಯಾದಾ ಹತ್ಯೆ ಮಾಡಿದ್ದರು. 
ಅತ್ತ ಪ್ರೀತಿಸಿದ ಯುವತಿಯನ್ನು ಬಾಳ ಸಂಗಾತಿಯಾಗಿ ಪಡೆಯುವ ಆಸೆ ಹೊತ್ತು ಮದುಮಗ ಮದುವೆಗೆ ಭರದ ಸಿದ್ದತೆ ಮಾಡಿಕೊಂಡಿದ್ದ, ಮನೆಯ ಮುಂದೆ ಚಪ್ಪರ ಹಾಕಲಾಗಿತ್ತು. ಬಂಧು ಬಳಗ ಮನೆಗೆ ಆಗಮಿಸಿದ್ದರು. ಈ ವೇಳೆ ತನ್ನ ಭಾವಿ ಪತ್ನಿಯ ಕೊಲೆಯಾಗಿದೆ ಎಂಬ ದುರ್ವಾತೆ ವರನ ಕಿವಿಗೆ ಮುಟ್ಟಿದೆ.
ಇದರಿಂದ ತೀವ್ರ ಮನನೊಂದ ವರ ಮದುವೆಗೆಂದು ತಂದಿದ್ದ ಸೀರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಮರ್ಯಾದಾ ಹತ್ಯೆಗೆ ಬಲಿಯಾದವಳು 22 ವರ್ಷದ ಅತಿರಾ ರಾಜನ್. ಅತಿರಾ ದಲಿತ ಯುವಕ ಬ್ರಿಜೇಶ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತ ಬೇರೆ ಜಾತಿಯವನಾಗಿದ್ದ. ಆದರೆ ಆಕೆಯ ತಂದೆ ಇವರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು. ನಂತರ ಅತಿರಾ ಒತ್ತಡ ಹೇರುತ್ತಿದ್ದರಿಂದ ತಂದೆ ಮದುವೆಗೆ ಒಪ್ಪಿಕೊಂಡಿದ್ದರು. ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಶುಕ್ರವಾರದಂದು ಮದುವೆ ನಿಗದಿಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ಬಿ ನಾಗೇಂದ್ರ ರಾಜೀನಾಮೆ; ಸುಳ್ಳೇ ಬಿಜೆಪಿ ಮನೆ ದೇವರು: CM DK Shivakumar

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ! Video

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

Toxic: ಇಂತಹ ವಿಭಿನ್ನ ಸಿನಿಮಾ ಮಾಡಲು ಗಟ್ಸ್ ಬೇಕು; ಯಶ್ ಹಾಡಿ ಹೊಗಳಿದ ಕಿಚ್ಚ ಸುದೀಪ್!

ರಕ್ಷಾ ಬಂಧನ: ವಿರಾಟ್ ಕೊಹ್ಲಿ ಸಹೋದರಿಯ ಪೋಸ್ಟ್; ಫೋಟೋ ವೈರಲ್!