ಮದುಮಗ ಬ್ರಿಜೇಶ್ 
ದೇಶ

ಕೇರಳ ಮರ್ಯಾದಾ ಹತ್ಯೆ: ನೊಂದ ವರ ಮದುವೆ ಸೀರೆಯಿಂದ ನೇಣಿಗೆ ಶರಣು!

ಮದುವೆಗೆ ಕೆಲವೇ ಕೆಲವು ಗಂಟೆಗಳು ಬಾಕಿಯಿರುವಾಗಲೇ ತನ್ನ 22 ವರ್ಷದ ಮಗಳನ್ನು ತಂದೆಯೇ ಹತ್ಯೆ ಮಾಡಿದ್ದರು. ಇದರಿಂದ ನೊಂದ ವರ ವಧುವಿಗೆ ತಂದಿದ್ದ...

ಮಲ್ಲಾಪುರಂ: ಮದುವೆಗೆ ಕೆಲವೇ ಕೆಲವು ಗಂಟೆಗಳು ಬಾಕಿಯಿರುವಾಗಲೇ ತನ್ನ 22 ವರ್ಷದ ಮಗಳನ್ನು ತಂದೆಯೇ ಹತ್ಯೆ ಮಾಡಿದ್ದರು. ಇದರಿಂದ ನೊಂದ ವರ ವಧುವಿಗೆ ತಂದಿದ್ದ ಸೀರೆಯಿಂದಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. 
ಕೇರಳದ ಅರೆಕೋಡ್ ನ ಪಾತನಾಪುರಂನ ಪೋವತಿಂಗಲ್ ನಿವಾಸಿಯಾಗಿದ್ದ ರಾಜನ್ ಎಂಬುವರು ದಲಿತ ಯುವಕನಿಗೆ ತನ್ನ ಮಗಳನ್ನು ಮದುವೆ ಮಾಡಿಕೊಡಲು ಇಷ್ಟವಿಲ್ಲದೆ ಮದುವೆಗೆ ಕೆಲ ಘಂಟೆಗಳು ಬಾಕಿ ಇರುವಾಗಲೇ ಮರ್ಯಾದಾ ಹತ್ಯೆ ಮಾಡಿದ್ದರು. 
ಅತ್ತ ಪ್ರೀತಿಸಿದ ಯುವತಿಯನ್ನು ಬಾಳ ಸಂಗಾತಿಯಾಗಿ ಪಡೆಯುವ ಆಸೆ ಹೊತ್ತು ಮದುಮಗ ಮದುವೆಗೆ ಭರದ ಸಿದ್ದತೆ ಮಾಡಿಕೊಂಡಿದ್ದ, ಮನೆಯ ಮುಂದೆ ಚಪ್ಪರ ಹಾಕಲಾಗಿತ್ತು. ಬಂಧು ಬಳಗ ಮನೆಗೆ ಆಗಮಿಸಿದ್ದರು. ಈ ವೇಳೆ ತನ್ನ ಭಾವಿ ಪತ್ನಿಯ ಕೊಲೆಯಾಗಿದೆ ಎಂಬ ದುರ್ವಾತೆ ವರನ ಕಿವಿಗೆ ಮುಟ್ಟಿದೆ.
ಇದರಿಂದ ತೀವ್ರ ಮನನೊಂದ ವರ ಮದುವೆಗೆಂದು ತಂದಿದ್ದ ಸೀರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಮರ್ಯಾದಾ ಹತ್ಯೆಗೆ ಬಲಿಯಾದವಳು 22 ವರ್ಷದ ಅತಿರಾ ರಾಜನ್. ಅತಿರಾ ದಲಿತ ಯುವಕ ಬ್ರಿಜೇಶ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತ ಬೇರೆ ಜಾತಿಯವನಾಗಿದ್ದ. ಆದರೆ ಆಕೆಯ ತಂದೆ ಇವರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು. ನಂತರ ಅತಿರಾ ಒತ್ತಡ ಹೇರುತ್ತಿದ್ದರಿಂದ ತಂದೆ ಮದುವೆಗೆ ಒಪ್ಪಿಕೊಂಡಿದ್ದರು. ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಶುಕ್ರವಾರದಂದು ಮದುವೆ ನಿಗದಿಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

60 ದಿನಗಳ ಕದನ ವಿರಾಮ ವಿಸ್ತರಣೆಗೆ ಅಮೆರಿಕ, ಇರಾನ್ ಸಂಧಾನಕಾರರು ಒಪ್ಪಿಗೆ; ಟ್ರಂಪ್ ಅನುಮೋದನೆ ಬಾಕಿ

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

SCROLL FOR NEXT