ಕೆಜೆ ಅಲ್ಫೋನ್ಸ್ 
ದೇಶ

ಜನ ಆಧಾರ್ ಪ್ರಶ್ನಿಸುತ್ತಾರೆ, ಆದರೆ ವೀಸಾಗಾಗಿ ಬಿಳಿಯರ ಮುಂದೆ ಬೆತ್ತಲೆಯಾಗಲು ಸಿದ್ಧ: ಕೇಂದ್ರ ಸಚಿವ

ಆಧಾರ್ ಮಾನ್ಯತೆ ಪ್ರಶ್ನಿಸುವವರನ್ನು ಕಟುವಾಗಿ ಟೀಕಿಸಿದ ಕೇಂದ್ರ ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಕೆ ಜೆ ಅಲ್ಫೋನ್ನ್ಸ್ ಅವರು....

ತ್ರಿವೇಂದ್ರಂ: ಆಧಾರ್ ಮಾನ್ಯತೆ ಪ್ರಶ್ನಿಸುವವರನ್ನು ಕಟುವಾಗಿ ಟೀಕಿಸಿದ ಕೇಂದ್ರ ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಕೆ ಜೆ ಅಲ್ಫೋನ್ನ್ಸ್ ಅವರು, ಜನ ವೀಸಾಗಾಗಿ ಬಿಳಿಯರ ಮುಂದೆ ಬೆತ್ತಲೆಯಾಗಲು ಸಿದ್ಧ ಎಂದು ಭಾನುವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವೀಸಾ ಪಡೆಯಲು ಬೆತ್ತಲೆಯಾದರೂ ಜನಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ ಅವರದ್ದೇ ಸರ್ಕಾರ ಯಾವುದೇ ದತ್ತಾಂಶ ಅಥವಾ ಮಾಹಿತಿ ಕೇಳಿದರೆ ಮಾತ್ರ ಸಮಸ್ಯೆಯಾಗುತ್ತದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ಅಮೆರಿಕಾ ವೀಸಾ ಪಡೆಯಲು ನಾನು 10 ಪುಟಗಳ ಮಾಹಿತಿ ನೀಡಿದ್ದೇನೆ. ವೀಸಾಗಾಗಿ ಬೆರಳಚ್ಚು ನೀಡಲು ಮತ್ತು ಬಿಳಿಯರ ಮುಂದೆ ಬೆತ್ತಲೆಯಾದರೂ ನಮಗೆ ಯಾವುದೇ ತೊಂದರೆ ಇಲ್ಲ ಎಂದು ಅಲ್ಫೋನ್ಸ್ ಆಕ್ರೇಶ ವ್ಯಕ್ತಪಡಿಸಿದ್ದಾರೆ.
ನಿಮ್ಮದೇ ಸರ್ಕಾರ ನಿಮ್ಮ ಹೆಸರು ಮತ್ತು ವಿಳಾಸ ಕೇಳಿದರೆ ಅದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತೀರಾ ಮತ್ತು ಖಾಸಗಿತನ ಹಕ್ಕಿನ ಉಲ್ಲಂಘನೆ ಎನ್ನುತ್ತೀರಿ ಎಂದಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅಲ್ಫೋನ್ಸ್ 'ಪ್ರಧಾನಿ ನರೇಂದ್ರ ಮೋದಿ ಅವರು ನಿಮ್ಮ ದತ್ತಾಂಶವನ್ನು ಖಾಸಗಿ ಕಂಪನಿಗೆ ನೀಡುತ್ತಾರೆ ಎಂದು ನೀವು ಭಾವಿಸಿದ್ದೀರಾ? ಅಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ. ನಿಮ್ಮ ಯಾವುದೇ ಖಾಸಗಿತನದ ಮಾಹಿತಿ ಸೋರಿಕೆಯಾಗುತ್ತಿಲ್ಲ. ಅದು ಸಂಪೂರ್ಣ ಸುರಕ್ಷಿತವಾಗಿದೆ' ಎಂದು ಸಚಿವರು ಹೇಳಿದ್ದಾರೆ.
ಆಧಾರ್ ಮಾಹಿತಿ ಪಡೆಯಲು ಕೆಲವು ಸರ್ಕಾರಿ ಸಂಸ್ಥೆಗಳಿಗೆ ಮಾತ್ರ ನಾವು ಅವಕಾಶ ಕೊಟ್ಟಿದ್ದೇವೆ ಎಂದು ಅಲ್ಫೋನ್ಸ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT