ಐಎನ್ಎಕ್ಸ್ ಮೀಡಿಯಾ ಪ್ರಕರಣ: ಮಾ.31ರವರೀಗೆ ಸಿಬಿಐ ಕಸ್ಟಡಿಗೆ ಪೀಟರ್ ಮುಖರ್ಜಿಯಾ 
ದೇಶ

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಮಾ.31ರವರೆಗೆ ಸಿಬಿಐ ಕಸ್ಟಡಿಗೆ ಪೀಟರ್ ಮುಖರ್ಜಿಯಾ

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮೀಡಿಯಾ ಬ್ಯಾರನ್ ಪೀಟರ್ ಮುಖರ್ಜಿಯಾ ಅವರನ್ನು ಮಾ. 31ರವರೆಗೆ ಸಿಬಿಐ ವಶಕ್ಕೆ ಒಪ್ಪಿ..........

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮೀಡಿಯಾ ಬ್ಯಾರನ್ ಪೀಟರ್ ಮುಖರ್ಜಿಯಾ ಅವರನ್ನು ಮಾ. 31ರವರೆಗೆ ಸಿಬಿಐ ವಶಕ್ಕೆ ಒಪ್ಪಿಸಿ  ದೆಹಲಿ ನ್ಯಾಯಾಲಯವುಸೋಮವಾರ ಆದೇಶ ಹೊರಡಿಸಿದೆ.
ಇದಕ್ಕೂ ಮುನ್ನ ತನಿಖಾ ದಳವು ಹೆಚ್ಚುವರಿ ತನಿಖೆಗಾಗಿ ಮುಖರ್ಜಿಯಾ ಅವರನ್ನು ಐದು ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. 
ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಸಹಾಯ ಪಡೆದು ಐಎನ್ಎಕ್ಸ್ ಮಿಡಿಯಾ ಮಾಲೀಕರಾದ ಮುಖರ್ಜಿಯಾ ಫಾರಿನ್ ಇನ್ವೆಸ್ಟ್ಮೆಂಟ್ ಪ್ರೋಮೋಷನ್ ಬೋರ್ಡ್ (ಎಫ್ಐಪಿಬಿ) ಅನುಮೋದನೆಯನ್ನು ಪಡೆಯಲು ಲಂಚ ನೀಡಿದ್ದರು. 
ಅದಾಗ್ಯೂ ಮಾರ್ಚ್ 23 ರಂದು ಪ್ರಕರಣದ ಪ್ರಮುಖ ಆರೋಪಿಗಳಾದ ಕಾರ್ತಿ ಚಿದಂಬರಂ ಅವರಿಗೆ 10 ಲಕ್ಷ ರೂ ಮುಚ್ಚಳಿಕೆ ಪತ್ರದ ಆಧಾರದ ಮೇಲೆ ದೆಹಲಿ ಹೈಕೋರ್ಟ್ ಜಾಮೀನು  ಮಂಜೂರು ಮಾಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT